ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಸರ್ಕಾರದ ಮೇಲೆ ಯತ್ನಾಳ ಗರಂ

07:28 PM Jan 09, 2024 IST | Samyukta Karnataka

ವಿಜಯಪುರ: ನಗರದ ಬಿಜೆಪಿ ಮಹಾನಗರ ಪಾಲಿಕೆ ಸದಸ್ಯರೋರ್ವರು ಅಕಾಲಿಕ ನಿಧನರಾದ ಪ್ರಯುಕ್ತ ಚುನಾವಣಾ ಮುಂದೂಡಬೇಕು ಎಂದು ಕೋರ್ಟ್ ಮೆಟ್ಟಿಲೇರಲಾಗಿತ್ತು, ಈ ಬಗ್ಗೆ ಹೈಕೋರ್ಟ್ ಪ್ರಾದೇಶಿಕ ಆಯುಕ್ತರಿಗೆ ನೋಟಿಸ್ ನೀಡಿದರೂ ಸಹ ಅದನ್ನೆಲ್ಲವನ್ನೂ ಬದಿಗೊತ್ತಿ ಜಿಲ್ಲಾ ಉಸ್ತುವಾರಿ ಸಚಿವರ ಅಣತಿಯಂತೆ ಪ್ರಾದೇಶಿಕ ಆಯುಕ್ತರು ಚುನಾವಣಾ ಪ್ರಕ್ರಿಯೆ ನಡೆಸಿರುವುದು ಖಂಡನೀಯ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ರೋಶ ಹೊರಹಾಕಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ರೀತಿ ಏಕಪಕ್ಷೀಯವಾಗಿ ಪ್ರಾದೇಶಿಕ ಆಯುಕ್ತರು ವರ್ತನೆ ಮಾಡಿದ್ದಾರೆ, ಈ ಬಗ್ಗೆ ಕಾನೂನಾತ್ಮಕ ಹೋರಾಟ ಕೈಗೊಳ್ಳುವ ಬಗ್ಗೆಯೂ ಚಿಂತನೆ ನಡೆಸಲಾಗುವುದು. ಬಿಜೆಪಿ ಮೇಯರ್ ಹುದ್ದೆ ಅಲಂಕರಿಸಲಿದೆ ಎಂಬ ಅಂಜಿಕೆಯಿಂದಲೇ ಕಾಂಗ್ರೆಸ್ ಆಡಳಿತ ಯಂತ್ರ ಬಳಸಿ ಈ ರೀತಿ ಮೋಸದಿಂದ ಗೆಲುವು ಸಾಧಿಸಿದೆ, ಇಂದು ಅವರು ಮೋಸದಿಂದ ಗೆಲುವು ಸಾಧಿಸಿದೆ ಅಷ್ಟೇ ಎಂದರು.

Next Article