For the best experience, open
https://m.samyuktakarnataka.in
on your mobile browser.

ಸಿಎಂ ಕಾರ್ಯಕ್ರಮ: ಅಧಿಕಾರಿಗಳೊಂದಿಗೆ ಸಚಿವ ಲಾಡ್ ಪೂರ್ವಭಾವಿ ಸಭೆ

01:06 PM Feb 18, 2024 IST | Samyukta Karnataka
ಸಿಎಂ ಕಾರ್ಯಕ್ರಮ  ಅಧಿಕಾರಿಗಳೊಂದಿಗೆ ಸಚಿವ ಲಾಡ್ ಪೂರ್ವಭಾವಿ ಸಭೆ

ನವಲಗುಂದ: ಪ್ರತಿ ಇಲಾಖೆಗಳು ತಮ್ಮ ತಮ್ಮ ಕಾರ್ಯಗಳ ಬಗ್ಗೆ ಜಾಗೃತಿ ವಹಿಸಬೇಕು. ಅಧಿಕಾರಿಗಳು ಸೂಕ್ತ ನಿಗಾ ವಹಿಸಿ ಕೆಲಸ ಮಾಡಬೇಕು ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಪಟ್ಟಣದ ಹುರಕಡ್ಲಿ ಅಜ್ಜನ ಕಲ್ಯಾಣ ಕೇಂದ್ರದಲ್ಲಿ ಅಧಿಕಾರಿಗಳ ತಂಡದೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಅವರು ವಿವಿಧ ಕಾಮಗಾರಿ ಉದ್ಘಾಟನೆಗೆ ಆಗಮಿಸುತ್ತಿರುವ ಮುಖ್ಯಮಂತ್ರಿಗಳು ಅವರು ಬಂದಾಗ ಯಾವ ರೀತಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂಬುದರ ಬಗ್ಗೆ ಚರ್ಚೆ ನಡೆಸಿ ಮಾರ್ಗದರ್ಶನ ನೀಡಿದರು.

ಈ ವೇಳೆ ಶಾಸಕ ಎನ್.ಎಚ್.ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯಪ್ರಭು, ಎಸ್ಪಿ ಗೋಪಾಲ್ ಬ್ಯಾಕೋಡ್ ಸೇರಿದಂತೆ ಸಭೆಯಲ್ಲಿ ಎಲ್ಲಾ ಇಲಾಖೆಯ ಸಿಬ್ಬಂದಿ ಹಾಜರಿದ್ದರು.