ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

2024ನೇ ವರ್ಷ ರಾಜ್ಯಕ್ಕೆ ಆಶಾದಾಯಕವಾಗಲಿದೆ

07:04 PM Jan 01, 2024 IST | Samyukta Karnataka

ಬೆಂಗಳೂರು: ಸರ್ಕಾರದ ಕಾರ್ಯದರ್ಶಿಗಳಿಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024ನೇ ವರ್ಷಕ್ಕೆ ನಾವೆಲ್ಲರೂ ಕಾಲಿಡುತ್ತಿದ್ದು, ಈ ವರ್ಷ ರಾಜ್ಯಕ್ಕೆ ಆಶಾದಾಯಕವಾಗಿದೆ ಎಂದರು.
ರಾಜ್ಯದ ಮುಖ್ಯ ಕಾರ್ಯದರ್ಶಿ, ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಇಂದು ಅವರನ್ನು ಇಂದು ಭೇಟಿಯಾಗಿ ನೂತನ ವರ್ಷದ ಶುಭಾಶಯಗಳನ್ನು ಕೋರಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ 35 ಸಾವಿರ ಕೋಟಿ ಬೆಳೆ ನಷ್ಟವಾಗಿದೆ. ಪ್ರಕೃತಿ ಸಹಾಯವಿಲ್ಲದಿದ್ದರೆ, ಸರ್ಕಾರ ಏನು ಪರಿಹಾರ ಕೊಟ್ಟರು ಸಾಕಾಗುವುದಿಲ್ಲ. ಹವಾಮಾನ ಬದಲಾವಣೆಯಿಂದಾಗಿ ಈ ವೈಪರೀತ್ಯ ಕಾಣುತ್ತಿದ್ದೇವೆ. ಮುಂಗಾರಿನಲ್ಲಿ ಒಳ್ಳೆ ಮಳೆಯಾಗುವ ನಿರೀಕ್ಷೆ ಇದೆ. 2024ರಲ್ಲಿ ಒಳ್ಳೆಯ ಮಳೆ ಬೆಳೆ ಆಗಲಿ ಎಂದು ಪ್ರಾರ್ಥನೆ ಮಾಡುವುದಾಗಿ ತಿಳಿಸಿದರು.
ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆ
ಅಭಿವೃದ್ಧಿ ನಿರೀಕ್ಷಿತ ಫಲ ಕಾಣಲು ಸಮೃದ್ಧಿಯಾಗಿ ಮಳೆಯಾಗಲಿ. ಶೇ. 60ಕ್ಕೂ ಹೆಚ್ಚು ಜನ ವ್ಯವಸಾಯದ ಮೇಲೆ ಅವಲಂಬಿತರಾಗಿದ್ದಾರೆ. ಗ್ಯಾರಂಟಿಗಳನ್ನು ಕೊಟ್ಟಿದ್ದರಿಂದ ಬರದ ತೀವ್ರತೆ ಕಡಿಮೆಯಾಗಿದೆ. ಬಡವರ ಕುಟುಂಬಕ್ಕೆ ಹಣ ದೊರೆಯುತ್ತಿದ್ದು ಕೊಳ್ಳುವ ಶಕ್ತಿ ಇದೆ. ಬರಗಾಲವಿದ್ದರೂ ಸ್ವಲ್ಪ ಮಟ್ಟಿಗೆ ಅದರ ತೀವ್ರತೆ ಕಡಿಮೆಯಾಗಿದೆ ಎಂದು ಅಭಿಪ್ರಾಯ ಪಟ್ಟರು. ಇಲ್ಲದಿದ್ದರೆ ಹಾಹಾಕಾರ ಶುರುವಾಗುತ್ತಿತ್ತು. ಸಾರ್ವತ್ರಿಕ ಮೂಲ ಆದಾಯದ ತತ್ವದ ತಳಹದಿಯ ಮೇಲೆ ಜನರ ಆದಾಯ ಹೆಚ್ಚಿಸಿ ಆರ್ಥಿಕ ಚಟುವಟಿಕೆಗಳಿಗೆ ಇಂಬು ದೊರೆತಿದೆ ಎಂದರು. ರಾಜ್ಯ ದ ಜನರ ಅಭಿವೃದ್ಧಿಗಾಗಿ ಜನ ನಮ್ಮನ್ನು ಆಯ್ಕೆ ಮಾಡಿದ್ದಾರೆ. ಸರ್ಕಾರ ಆಡಳಿತ ವರ್ಗವನ್ನು ಆಯ್ಕೆ ಮಾಡಿದೆ. ಜನಪರ, ಸಮಾಜಮುಖಿ ಧೋರಣೆ ಇದ್ದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು, ಸಂವಿಧಾನದ ಆಶಯಗಳನ್ನು ಈಡೇರಿಸಲು ಸಾಧ್ಯವಾಗುತ್ತದೆ ಎಂದರು.

Next Article