For the best experience, open
https://m.samyuktakarnataka.in
on your mobile browser.

5ನೇ ಬಾರಿ ಟಿಕೆಟ್: ನಾಯಕರ-ಜನರ ಪ್ರೀತಿ, ವಿಶ್ವಾಸಕ್ಕೆ ಚಿರಋಣಿ

09:07 PM Mar 13, 2024 IST | Samyukta Karnataka
5ನೇ ಬಾರಿ ಟಿಕೆಟ್  ನಾಯಕರ ಜನರ ಪ್ರೀತಿ  ವಿಶ್ವಾಸಕ್ಕೆ ಚಿರಋಣಿ

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನಿರೀಕ್ಷೆಯಂತೆ ಸತತ 5ನೇ ಬಾರಿ ತಮಗೆ ಸಿಕ್ಕಿದ್ದು, ಸರ್ವರ ಪ್ರೀತಿ, ವಿಶ್ವಾಸಕ್ಕೆ ಚಿರಋಣಿಯಾಗಿರುವೆ ಎಂದು ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿದ್ದಾರೆ

ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಳೆದ ಇಪ್ಪತ್ತು ವರ್ಷಗಳಿಂದ‌ ಧಾರವಾಡ ಲೋಕಸಭಾ ಕ್ಷೇತ್ರದ ಜನರ ಪ್ರೀತಿ, ಆಶೀರ್ವಾದ ಮತ್ತು ಪಕ್ಷ ನಿಷ್ಠೆಗೆ ಪೂರಕವಾಗಿ ಸರ್ವ ರೀತಿಯ ಕೆಲಸ ಮಾಡುತ್ತಾ ಬಂದ ನನಗೆ ಪಕ್ಷದ ಹೈಕಮಾಂಡ್ ಮತ್ತೆ ಟಿಕೆಟ್ ನೀಡುವ ಮೂಲಕ ಅಭಿವೃದ್ಧಿ ಹೊಣೆಗಾರಿಕೆ ನೀಡಿದೆ ಎಂದು ಹೇಳಿದ್ದಾರೆ.

ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಆಡಳಿತದಲ್ಲಿ ಸಚಿವನಾಗಿ ಪ್ರಮುಖ ಖಾತೆಗಳನ್ನು ನಿರ್ವಹಿಸುವ ಅವಕಾಶ ದೊರೆತಿದ್ದು, ಕಿಂಚಿತ್ತೂ ಸಮಸ್ಯೆಯಾಗದಂತೆ ಸೇವೆ ಸಲ್ಲಿಸಿದ್ದೇನೆ. ಕಾರ್ಯಶ್ರದ್ಧೆ ಮೇಲೆ ವಿಸ್ವಾಸವಿಟ್ಟು ಪಕ್ಷ ಮತ್ತೊಮ್ಮೆ ಟಿಕೆಟ್ ನೀಡಿದೆ ಎಂದು ಪ್ರಹ್ಲಾದ ಜೋಶಿ ಹೇಳಿದರು.

ಈಗ ಪಕ್ಷದ ವರಿಷ್ಠರು ಮತ್ತು ಜನರ ಆಶೀರ್ವಾದದಿಂದ ಇದೀಗ ಮತ್ತೆ ಐದನೇ ಬಾರಿಗೆ ಧಾರವಾಡದ ಜನರ ಸೇವೆಗೆ ಅವಕಾಶ ಲಭಿಸಿದೆ. ಇದಕ್ಕಾಗಿ ಎಲ್ಲರಿಗೂ ಧನ್ಯವಾದ ಅರ್ಪಿಸುವೆ ಎಂದು ಸಚಿವ ಪ್ರಹ್ಲಾದ ಜೋಶಿ ಹೇಳಿದರು.