For the best experience, open
https://m.samyuktakarnataka.in
on your mobile browser.

ತಿರುಪತಿ ಲಾಡು ವಿವಾದ: SIT ರಚಿಸಿದ ಸರ್ಕಾರ

11:59 AM Sep 27, 2024 IST | Samyukta Karnataka
ತಿರುಪತಿ ಲಾಡು ವಿವಾದ  sit ರಚಿಸಿದ ಸರ್ಕಾರ

ತಿರುಪತಿ: ತಿರುಪತಿ ಲಡ್ಡು ಪ್ರಸಾದಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಸರ್ಕಾರವು ಲಾಡು ವಿವಾದಕ್ಕೆ ಸಂಬಂಧಿಸಿ ಸಮಗ್ರ ತನಿಖೆ ನಡೆಸಲು ಎಸ್‌ಐಟಿಯನ್ನು ರಚಿಸಿದೆ.
ಪ್ರಕರಣದ ತನಿಖೆ ನಡೆಸಲು ಆಂಧ್ರಪ್ರದೇಶ ಸರ್ಕಾರವು 9 ಸದಸ್ಯರ ತಂಡವನ್ನು ರಚಿಸಿದ್ದು. ಗುಂಟೂರು ರೇಂಜ್‌ ಇನ್ಸ್ ಪೆಕ್ಟರ್‌ ಜನರಲ್‌ ಆಫ್‌ ಪೊಲೀಸ್‌‍ ಸರ್ವಶ್ರೇಷ್ಠ ತ್ರಿಪಾಠಿ ನೇತತ್ವದಲ್ಲಿ ಈ ತನಿಖೆ ನಡೆಯಲಿದೆ. ತಿರುಮಲದಲ್ಲಿ ಹಿಂದಿನ ವೈಎಸ್‌‍ಆರ್‌ ಕಾಂಗ್ರೆಸ್‌‍ ಪಕ್ಷದ ಆಡಳಿತಾವಧಿಯಲ್ಲಿ ನಡೆದಿರುವ ಇತರ ಅಕ್ರಮಗಳ ಬಗ್ಗೆಯೂ ಎಸ್‌‍ಐಟಿ ತನಿಖೆ ನಡೆಸಲಿದೆ.

Tags :