For the best experience, open
https://m.samyuktakarnataka.in
on your mobile browser.

ದತ್ತಪೀಠ ಪ್ರಕರಣವನ್ನು ಮರುತನಿಖೆ ಮಾಡಲು ಹುನ್ನಾರ

03:58 PM Jan 04, 2024 IST | Samyukta Karnataka
ದತ್ತಪೀಠ ಪ್ರಕರಣವನ್ನು ಮರುತನಿಖೆ ಮಾಡಲು ಹುನ್ನಾರ

ಬೆಂಗಳೂರು: 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರುತನಿಖೆ ಮಾಡಲು ಹುನ್ನಾರ ನಡೆಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್​.ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ರಾಮಜನ್ಮಭೂಮಿ ಹೋರಾಟಕ್ಕೆ ಸಂಬಂಧಿಸಿದ 31 ವರ್ಷ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿ ಹುಬ್ಬಳ್ಳಿಯಲ್ಲಿ ಕರಸೇವಕರನ್ನು ಬಂಧಿಸಿದ್ದಾಯ್ತು, ಈಗ 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರುತನಿಖೆ ಮಾಡಲು ಹುನ್ನಾರ ನಡೆಸಿದೆ ಈ ನೀಚ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ.ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡಿ ಹಿಂದೂ ಪರ ಧ್ವನಿ ಅಡಗಿಸುವ ನಿಮ್ಮ ಪ್ರಯತ್ನ ಫಲ ಕೊಡುವುದಿಲ್ಲ ಸಿಎಂ
ಸಿದ್ದರಾಮಯ್ಯ ಅವರೇ. ಹಿಂದೂ ಕಾರ್ಯಕರ್ತರ ಮೇಲಿನ ದೌರ್ಜನ್ಯ, ಕಿರುಕುಳವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.