ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದತ್ತಪೀಠ ಪ್ರಕರಣವನ್ನು ಮರುತನಿಖೆ ಮಾಡಲು ಹುನ್ನಾರ

03:58 PM Jan 04, 2024 IST | Samyukta Karnataka

ಬೆಂಗಳೂರು: 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರುತನಿಖೆ ಮಾಡಲು ಹುನ್ನಾರ ನಡೆಸಿದೆ ಎಂದು ವಿರೋಧ ಪಕ್ಷದ ನಾಯಕ ಆರ್​.ಅಶೋಕ್ ವಾಗ್ದಾಳಿ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ರಾಮಜನ್ಮಭೂಮಿ ಹೋರಾಟಕ್ಕೆ ಸಂಬಂಧಿಸಿದ 31 ವರ್ಷ ಹಳೆಯ ಪ್ರಕರಣಕ್ಕೆ ಮರುಜೀವ ನೀಡಿ ಹುಬ್ಬಳ್ಳಿಯಲ್ಲಿ ಕರಸೇವಕರನ್ನು ಬಂಧಿಸಿದ್ದಾಯ್ತು, ಈಗ 7 ವರ್ಷ ಹಳೆಯ ದತ್ತಪೀಠ ಪ್ರಕರಣವನ್ನು ಮರುತನಿಖೆ ಮಾಡಲು ಹುನ್ನಾರ ನಡೆಸಿದೆ ಈ ನೀಚ ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ.ಹಿಂದೂ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡಿ ಹಿಂದೂ ಪರ ಧ್ವನಿ ಅಡಗಿಸುವ ನಿಮ್ಮ ಪ್ರಯತ್ನ ಫಲ ಕೊಡುವುದಿಲ್ಲ ಸಿಎಂ
ಸಿದ್ದರಾಮಯ್ಯ ಅವರೇ. ಹಿಂದೂ ಕಾರ್ಯಕರ್ತರ ಮೇಲಿನ ದೌರ್ಜನ್ಯ, ಕಿರುಕುಳವನ್ನು ಬಿಜೆಪಿ ಸಹಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

Next Article