ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದಲಿತ ಮುಖ್ಯಮಂತ್ರಿ ಇತ್ಯಾದಿ ವಿಚಾರಗಳು ಸದ್ಯಕ್ಕೆ ಅಪ್ರಸ್ತುತ

06:05 PM Oct 06, 2024 IST | Samyukta Karnataka

ಹುಬ್ಬಳ್ಳಿ: ರಾಜ್ಯದಲ್ಲಿ ಸದ್ಯಕ್ಕೆ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಾಗಿ ದಲಿತ ಮುಖ್ಯಮಂತ್ರಿ ಇತ್ಯಾದಿ ವಿಚಾರಗಳು ಸದ್ಯಕ್ಕೆ ಅಪ್ರಸ್ತುತ ಎಂದು ರಾಜ್ಯಸಭಾ ಸದಸ್ಯ ಸೈಯದ್ ನಾಸಿರ್ ಹುಸೇನ್ ಹೇಳಿದರು.
ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಸಮುದಾಯದವರಿಗೂ ತಮ್ಮ ಸಮುದಾಯದವರು ಮುಖ್ಯಮಂತ್ರಿಯಾಗಬೇಕು ಎನ್ನುವ ಬಯಕೆ ಇರುವುದು ಸಹಜ ಎಂದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರದ್ದು ಯಾವುದೇ ತಪ್ಪು ಇಲ್ಲ. ಕಾಂಗ್ರೆಸ್ ಹೈಕಮಾಂಡ್ ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ಬೆಂಬಲವಾಗಿ ನಿಂತಿದೆ. ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಾದ ಹಿನ್ನಲೆಯಲ್ಲಿ ಬಿಜೆಪಿಯವರು ರಾಜೀನಾಮೆಗೆ ಆಗ್ರಹಿಸುತ್ತಿದ್ದಾರೆ. ಹಾಗಾದರೇ ಕೇಂದ್ರದಲ್ಲಿರುವ ಶೇ. ೩೦ರಷ್ಟು ಮಂತ್ರಿಗಳ ಮೇಲೆ ಬಹಳ ಗಂಭೀರವಾದ ಪ್ರಕರಣಗಳಿವೆ. ಅದಕ್ಕೂ ಇದಕ್ಕೂ ತಾಳೆ ಮಾಡಲು ಬರುವುದಿಲ್ಲ. ಹಾಗೆ ನೋಡಿದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಚಿವರಾಗೋಕೆ ಬರುವುದಿಲ್ಲ ಎಂದು ಹೇಳಿದರು.

Tags :
chief ministercongressSyed Nasir Hussain
Next Article