ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದೇವರಗುಡ್ಡಕ್ಕೆ ಸಿಎಂ ಭೇಟಿ: ದರ್ಶನಕ್ಕೆ ಭಕ್ತರ ಪರದಾಟ

02:03 PM Aug 30, 2024 IST | Samyukta Karnataka
ದೇವರ ದರ್ಶನಕ್ಕೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿರುವ ಭಕ್ತರು.

ಹಾವೇರಿ: ದೇವರಗುಡ್ಡದ ಮಾಲತೇಶ ದೇವರ ದರ್ಶನ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸುತ್ತಿರುವ ಹಿನ್ನೆಲೆ ಭಕ್ತರಿಗೆ ದೇವಸ್ಥಾನದ ಒಳಗಡೆ ನಿರ್ಬಂಧ ವಿಧಿಸಲಾಗಿದ್ದು, ಬಿಗಿ ಪೊಲೀಸ್ ಬಂದೊಬಸ್ತ್ ಮಾಡಲಾಗಿದೆ.
ದೇವಸ್ಥಾನದ ಆವರಣದಲ್ಲಿನ ಹಣ್ಣು,ಕಾಯಿ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ. ಸಿಎಂ ಸಿದ್ದರಾಮಯ್ಯನವರು ದೇವಸ್ಥಾನಕ್ಕೆ ಭೇಟಿ ನೀಡುವ ಮಾಹಿತಿ ಇಲ್ಲದೇ ವಿವಿಧಡೆಯಿಂದ ಆಗಮಿಸಿದ್ದ ಭಕ್ತಾದಿಗಳು ಸಮಸ್ಯೆ ಎದುರಿಸುವಂತಾಗಿದೆ. ದೇವಸ್ಥಾನ ಸುತ್ತಮುತ್ತ ಪೊಲೀಸ್ ಬಂದೋಬಸ್ತ ಮಾಡಿ ಬ್ಯಾರಿಗೆಟ್ ಅಳವಡಿಸಿ ಭಕ್ತರನ್ನು ತಡೆಯಲಾಗುತ್ತಿದ್ದು, ದೇವರ ದರ್ಶನಕ್ಕೆ ಬಂದಿದ್ದ ಭಕ್ತರು ಪೊಲೀಸರೊಂದಿಗೆ ವಾಗ್ವಾದ ನಡೆಸುತ್ತಿದ್ದಾರೆ.

ಸಂಜೆ 4 ಗಂಟೆವರೆಗೆ ದೇವಸ್ಥಾನಕ್ಕೆ ಭಕ್ತಾದಿಗಳಿಗೆ ನಿರ್ಭಂದ ಹೇರಿದ್ದು, ದೂರದ ಊರುಗಳಿಂದ ಆಗಮಿಸಿದ್ದ ಭಕ್ತರು ದೇವರ ದರ್ಶನ ಪಡೆಯದೇ ವಾಪಾಸ್ ತೆರಳುತ್ತಿದ್ದಾರೆ.

ನಾವು ಭದ್ರಾವತಿಯಿಂದ ಬಂದಿದ್ವಿ.‌ ದೇವರ ದರ್ಶನಕ್ಕೆ ಬಂದಿದ್ದೇವು. ಆದರೆ ಪೊಲೀಸರು ದೇವಸ್ಥಾನದ ಒಳಗಡೆ ಬಿಡುತ್ತಿಲ್ಲ, ಸಿಎಂ ಬರ್ತಾರೆ ದೇವರ ದರ್ಶನಕ್ಕೆ ಅವಕಾಶ ಇಲ್ಲ ಅಂತಾ ಮೊದಲೇ ಹೇಳಬೇಕಿತ್ತು ಎಂದು ದೇವರ ದರ್ಶನಕ್ಕೆ ಆಗಮಿಸಿದ್ದ ಭದ್ರಾವತಿಯ ಅವಿನಾಶ ದೂರಿದರು.

Tags :
#cmsiddaramaiah#haveri#ದೇವರಗುಡ್ಡ#ಹಾವೇರಿ
Next Article