ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದೇಶ ಇಬ್ಭಾಗ ಮಾಡಲು ಹೊರಟ ಖರ್ಗೆ

05:20 PM May 02, 2024 IST | Samyukta Karnataka

ಕೊಪ್ಪಳ: ಉತ್ತರ ಭಾರತದವರು ಈಶ್ವರ ಭಕ್ತರು ಮತ್ತು ದಕ್ಷಿಣ ಭಾರತದವರು ವಿಷ್ಣು ಭಕ್ತರು. ಇವರಲ್ಲಿ ಯಾರು ಗೆಲ್ಲುತ್ತಾರೆ ಎಂಬುದನ್ನು ತೋರಿಸಬೇಕು. ಈ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶವನ್ನು ಇಬ್ಭಾಗ ಮಾಡಲು ಹೊರಟಿದ್ದಾರೆ ಎಂದು ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಹೇಳಿದರು.
ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಉತ್ತರ ಭಾರತದವರು ಈಶ್ವರ ಭಕ್ತರು ಮತ್ತು ದಕ್ಷಿಣ ಭಾರತದವರು ವಿಷ್ಣು ಭಕ್ತರು ಎನ್ನುವ ಹೇಳಿಕೆಯಿಂದ ಮಲ್ಲಿಕಾರ್ಜುನ ಖರ್ಗೆ ದೇಶವನ್ನು ಒಡೆಯಲು ಹೊರಟಿದ್ದಾರೆ. ಈ ರೀತಿಯ ಹೇಳಿಕೆ ನೀಡುವುದು ಒಳ್ಳೆಯ ಸಂಸ್ಕೃತಿ ಅಲ್ಲ. ಇದು ಚುನಾವಣೆಯ ವಿಷಯ ಅಲ್ಲ. ಚುನಾವಣೆಯಲ್ಲಿ ಆರ್ಥಿಕ ಸುಧಾರಣೆ, ಶೈಕ್ಷಣಿಕ ರಂಗದಕ್ರಾಂತಿ ಮತ್ತು ಅಭಿವೃದ್ಧಿ ಬಗ್ಗೆ ಚರ್ಚೆ ಆಗಬೇಕು. ದೇಶವನ್ನು ೫೬ ವರ್ಷಗಳ ಕಾಲ ಅಡಳಿತ ಮಾಡಿದ ಕಾಂಗ್ರೆಸ್‌ ಅಭಿವೃದ್ಧಿ ಕೆಲಸಗಳನ್ನು ಹೇಳುವ ಮೂಲಕ ಚುನಾವಣೆ ಎದುರಿಸಬೇಕು. ಚುನಾವಣೆಯ ವಿಷಯ ಬಿಟ್ಟು, ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದರು.

Next Article