ಅನ್ಯಾಯದ ಬಗ್ಗೆ ರಾಜ್ಯ ಬಜೆಟ್ ಬಳಿಕ ಶ್ವೇತಪತ್ರ
12:02 PM Feb 07, 2024 IST
|
Samyukta Karnataka
ನವದೆಹಲಿ: ರಾಜ್ಯ ಕಾಂಗ್ರೆಸ್ ನಾಯಕರು ರಾಜಧಾನಿ ದೆಹಲಿಯಲ್ಲಿ ‘ನನ್ನ ತೆರಿಗೆ ನನ್ನ ಹಕ್ಕು–ಚಲೋ ದಿಲ್ಲಿ’ ಹೆಸರಿನಲ್ಲಿ ಜಂತರ್ ಮಂತರನ್ಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ದೆಹಲಿಯ ಹಲಿಯ ಜಂತರ್ ಮಂತರ್ನಲ್ಲಿ ಆಯೋಜಿಸಲಾಗಿರುವ ಪ್ರತಿಭಟನೆಗೂ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕರ್ನಾಟಕ 100 ರೂಪಾಯಿ ತೆರಿಗೆ ಪಾಲು ಕೊಟ್ಟರೆ, ಕೇವಲ 12-13 ರೂ ಮಾತ್ರ ನೀಡುತ್ತಿದೆ. ಇದು ಬಹಳ ದೊಡ್ಡ ಅನ್ಯಾಯ. ಈ ಅನ್ಯಾಯದ ಬಗ್ಗೆ ಒಂದು ದಿನವೂ ಕೂಡ ಕರ್ನಾಟಕದ 25 ಬಿಜೆಪಿ ಸಂಸದರು ಒಮ್ಮೆ ಕೂಡ ಬಾಯಿ ತೆರೆದಿಲ್ಲ” ಎಂದು ಬಿಜೆಪಿ ಸಂಸದರ ವಿರುದ್ಧ ಹರಿಹಾಯ್ದರು.
ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ರಾಜ್ಯ ಬಜೆಟ್ ಮಂಡನೆಯ ಬಳಿಕ ಶ್ವೇತಪತ್ರ ಹೊರಡಿಸುತ್ತೇವೆ. ಬಜೆಟ್ ಕೂಡ ಒಂದು ಶ್ವೇತಪತ್ರವೇ ಆಗಿದೆ. ಆದರೂ ನಾವು ಶ್ವೇತಪತ್ರ ಹೊರಡಿಸುತ್ತೇವೆ” ಎಂದು ಅವರು ಹೇಳಿದರು.
ಈ ಹೋರಾಟಕ್ಕೆ ದಕ್ಷಿಣದ ರಾಜ್ಯಗಳಾದ ಕೇರಳ, ತಮಿಳುನಾಡು ಕೂಡ ಸಾಥ್ ಕೊಟ್ಟಿದೆ.
Next Article