ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ದ್ವೇಷದ ರಾಜಕಾರಣಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್

11:29 AM Mar 15, 2024 IST | Samyukta Karnataka

ಬೆಂಗಳೂರು: ದ್ವೇಷದ ರಾಜಕಾರಣಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು ನಾಡು ಕಟ್ಟಿದ ದೊರೆ ಶ್ರೀ ಮನ್ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರಿಗೆ ಏಕವಚನ ಪ್ರಯೋಗ ಮಾಡಿದ್ದ ಸಿಎಂ ಸಿದ್ದರಾಮಯ್ಯನವರಿಗೆ ಜನಾನುರಾಗಿ ರಾಜಮನೆತನದ ಬಗ್ಗೆ ಎಷ್ಟು ದ್ವೇಷವಿದೆ ಎನ್ನುವುದು ಗುಟ್ಟೇನು ಅಲ್ಲ.
ಈಗ ಯದುವಂಶದ ಕುಡಿ ಶ್ರೀ ಯದುವೀರ್ ಒಡೆಯರ್ ಅವರಿಗೆ ಮೈಸೂರಿನಿಂದ ಬಿಜೆಪಿ ಟಿಕೆಟ್ ಸಿಕ್ಕ ಕೂಡಲೇ ರಾಜಮನೆತನದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯನವರ ನಡೆ ನೋಡಿದರೆ ತವರು ಜಿಲ್ಲೆಯಲ್ಲೇ ಲೋಕಸಭೆ ಚುನಾವಣೆಯ ಸೋಲಾಗುತ್ತಿರುವುದು ಅವರ ನಿದ್ದೆ ಕೆಡಿಸಿದಂತಿದೆ ಎಂದಿದ್ದಾರೆ.

Next Article