ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಧಾರವಾಡ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಜು.27 ರಂದು ರಜೆ

07:35 PM Jul 26, 2024 IST | Samyukta Karnataka

ಧಾರವಾಡ : ಧಾರವಾಡ ಜಿಲ್ಲೆಯಾದ್ಯಂತ ಸತತವಾಗಿ ಮಳೆಯಾಗುತ್ತಿರುವುದರಿಂದ ಹಾಗೂ ಶೀತಗಾಳಿ ಬೀಸುತ್ತಿರುವದರಿಂದ ಈಗಾಗಲೇ ಜುಲೈ 25, 26 ರಂದು ಎರಡು ದಿನ ಧಾರವಾಡ ಜಿಲ್ಲೆಯಾದ್ಯಂತ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ನೀಡಿದ ರಜೆಯನ್ನು ನಾಳೆ ಜುಲೈ 27, 2024 ರವರೆಗೆ ಮುಂದುವರೆಸಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಇಂದು ಸಂಜೆ ಆದೇಶಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಲ್ಲೆಯ ಬಹುತೇಕ ಕಡೆಗೆ ನಿರಂತರವಾಗಿ ಮಳೆ ಆಗುತ್ತಿದೆ. ಮತ್ತು ಶೀತಗಾಳಿ ಬಿಸುತ್ತಿದೆ. ಮಕ್ಕಳ ಆರೋಗ್ಯ ಮತ್ತು ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪದವಿಪೂರ್ವ ಕಾಲೇಜು, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಈ ರಜಾ ದಿನಗಳನ್ನು ಮುಂದಿನ ಸಾರ್ವಜನಿಕ ರಜಾ ದಿನಗಳಂದು ಹೆಚ್ಚುವರಿ ವರ್ಗಗಳನ್ನು ನಡೆಸುವ ಮೂಲಕ ಹೊಂದಾಣೆಕೆ ಮಾಡಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದ್ದಾರೆ.

Next Article