ಧಾರವಾಡ ಪ್ರವೇಶಕ್ಕೆ ಅನುಮತಿ: ವಿನಯ್ ಕುಲಕರ್ಣಿ ಅರ್ಜಿ ರದ್ದು
01:14 PM Mar 07, 2024 IST | Samyukta Karnataka
ಧಾರವಾಡ: ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ.
ಬಿಜೆಪಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣವನ್ನು ಸ್ಥಳೀಯ ನ್ಯಾಯಾಲಯದಲ್ಲೇ ಇತ್ಯರ್ಥ ಪಡಿಸಿಕೊಳ್ಳುವಂತೆ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಸೂಚನೆ ನೀಡಿದೆ. ಹತ್ಯೆ ಪ್ರಕರಣ ಸಂಬಂಧ ಕುಲಕರ್ಣಿಗೆ ಧಾರವಾಡ ಪ್ರವೇಶ ನಿರಾಕರಿಸಿ, ಸ್ಥಳೀಯ ಹಾಗೂ ಹೈಕೋರ್ಟ್ಗಳು ಆದೇಶ ನೀಡಿದ್ದವು. ಹೈಕೋರ್ಟ್ ಆದೇಶ ಪ್ರಶ್ನಿಸಿ ವಿನಯ್ ಕುಲಕರ್ಣಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.