ನೇಹಾ ಪ್ರಕರಣ: ಹುಬ್ಬಳ್ಳಿಗೆ ಬಂದಿಳಿದ ಸಿಐಡಿ ತಂಡ
10:52 PM Apr 22, 2024 IST | Samyukta Karnataka
ಹುಬ್ಬಳ್ಳಿ: ವಾಣಿಜ್ಯನಗರಿ ಜನರನ್ನು ಬೆಚ್ಚಿಬೀಳಿಸಿದ್ದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಓಡಿಗೆ ವಹಿಸಿದ್ದು, ಕೊಲೆ ಪ್ರಕರಣದ ತನಿಖೆಯನ್ನು ನಡೆಸಲು ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದ ತಂಡ ಸೋಮವಾರ ರಾತ್ರಿ ಹುಬ್ಬಳ್ಳಿಗೆ ಬಂದು ವಾಸ್ತವ್ಯ ಹೂಡಿದೆ.
ತಂಡದಲ್ಲಿ ಎಸ್ ಪಿ ಮತ್ತು ಡಿವೈಎಸ್ಪಿ ದರ್ಜೆ ಅಧಿಕಾರಿ ಸೇರಿ ಎಂಟು ಮಂದಿ ಸಿಬ್ಬಂದಿ ಇರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.