ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರತಿಯೊಬ್ಬರೂ ಪ್ರಾಣಿ ಸಂತತಿಯನ್ನು ಉಳಿಸಿ ಬೆಳೆಸೋಣ

02:51 PM Feb 18, 2024 IST | Samyukta Karnataka

ಹುಬ್ಬಳ್ಳಿ: ಎಲ್ಲರೂ ಪ್ರಾಣಿಗಳನ್ನು ಪ್ರೀತಿಸುವ ಹವ್ಯಾಸ ಬೆಳೆಸಿಕೊಳ್ಳುವ ಮೂಲಕ ಪ್ರಾಣಿ ಸಂತತಿಯನ್ನು ಉಳಿಸಿ ಬೆಳೆಸೋಣ ಎಂದು ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಹೇಳಿದರು.
ರವಿವಾರ ಇಂದಿರಾ ಗಾಜಿನ ಮನೆಯ ಆವರಣದಲ್ಲಿ ಜಿಲ್ಲಾ ಪಂಚಾಯತ ಹಾಗೂ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಪ್ರಾಣಿ ಕಲ್ಯಾಣ ಅರಿವು ಮೂಡಿಸುವ ಶಿಬಿರ ಹಾಗೂ ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು‌.
ಈ ಪ್ರದರ್ಶನದಿಂದ ಜನರಿಗೆ ವಿವಿಧ ತಳಿಗಳ ಬಗ್ಗೆ ಮಾಹಿತಿ ನೀಡಬಹುದು. ಮುಂದಿನ ದಿನಗಳಲ್ಲಿ ಪ್ರಾಣಿಗಳನ್ನು ಪ್ರೀತಿಸುವವರ ಸಂಖ್ಯೆ ಹೆಚ್ಚಾಗಲಿ ಮತ್ತು ಹೆಚ್ಚು ಹೆಚ್ಚು ಪ್ರಾಣಿಗಳನ್ನು ಸಾಕುವಂತಾಗಲಿ ಎಂದರು.
ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನದಲ್ಲಿ ವಿವಿಧ ಜಿಲ್ಲೆಗಳಿಂದ 60 ರೀತಿಯ ಶ್ವಾನದ ತಳಿಗಳು ಆಗಮಿಸಿದ್ದವು.
ಸುಮಾರು 260 ಶ್ವಾನಗಳು ನೋಂದಾಯಿಸಲ್ಪಟ್ಟಿದ್ದವು. ಅವುಗಳ ಜೊತೆ ಗಿಡ್ಡ ತಳಿಯ ಆಕಳುಗಳು ಕೂಡಾ ಅಗಮಿಸಿದ್ದವು. ಶ್ವಾನ ಪ್ರದರ್ಶನದಲ್ಲಿ ಸ್ಪರ್ಧೆ ಏರ್ಪಡಿಸಿ, ವಿಜೇತ ಶ್ವಾನಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತರಾದ ಡಾ.ಸಂತೋಷ ಬಿರಾದಾರ, ಕೆ.ಸಿ.ಐ.ನ್ಯಾಯಾಧೀಶರಾದ ಸ್ಟೀವ್ ಅಲ್ಬೇಡಾ, ಕೆಎಂಎಫ್ ನ ಜಂಟಿ ನಿರ್ದೇಶಕರಾದ ರಾಜಶೇಖರ ಪಾಟೀಲ, ಜಿಲ್ಲಾ ಪಾಲಿಕ್ಲಿನಿಕ್ ಉಪ ನಿರ್ದೇಶಕರಾದ ಡಾ. ಪ್ರಮೋದ ಮೂಡಲಗಿ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕರಾದ ಡಾ.ರವಿ ಸಾಲಿಗೌಡರ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು, ಇತರರು ಉಪಸ್ಥಿತರಿದ್ದರು.

Next Article