For the best experience, open
https://m.samyuktakarnataka.in
on your mobile browser.

ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನ ಲೋಕಾರ್ಪಣೆ

01:19 PM Dec 21, 2023 IST | Samyukta Karnataka
ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನ ಲೋಕಾರ್ಪಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್‌ ರಾಯಭಾರಿ ಶಿವರಾಜ್‌ ಕುಮಾರ್‌ ಅವರು ಜಾಹಿರಾತು ಬಿಡುಗಡೆಗೊಳಿಸಿದರು. ಸಮಾರಂಭದಲ್ಲಿ ಶ್ರೀಮತಿ ಗೀತಾ ಶಿವರಾಜ್‌ ಕುಮಾರ್‌, ಸಚಿವ ಮಧು ಬಂಗಾರಪ್ಪ, ಕೆ.ಎಂ.ಎಫ್‌ ಅಧ್ಯಕ್ಷ ಭೀಮಾ ನಾಯ್ಕ್‌ ಮೊದಲಾದವರು ಉಪಸ್ಥಿತರಿದ್ದರು.