ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಕಲಿ ಚಾನೆಲ್ ವಿರುದ್ಧ ಸರಕಾರಿ ಅಧಿಕಾರಿಗಳ ಪ್ರತಿಭಟನೆ

09:03 PM Dec 13, 2023 IST | Samyukta Karnataka

ಇಳಕಲ್: ತಮ್ಮ ಇಲಾಖೆಯ ವಿರುದ್ಧ ನಕಲಿ ಚಾನೆಲ್‌ಗಳಲ್ಲಿ ಬೇಕಾಬಿಟ್ಟಿ ಬರೆದುಕೊಂಡ ಬಗ್ಗೆ ಹುನಗುಂದ ಇಳಕಲ್ ಅವಳಿ ತಾಲೂಕುಗಳ ಪಂಚಾಯತಿ ಅಧಿಕಾರಿಗಳು ಪ್ರತಿಭಟನೆ ನಡೆಸಿದರು.
ಪಂಚಾಯತ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಜೊತೆಗೆ ಹಲವಾರು ಸಂಘಗಳು ಈ ಪ್ರತಿಭಟನೆಯಲ್ಲಿ ಕೈಜೋಡಿಸಿದ್ದು ಸಿಬ್ಬಂದಿ ವರ್ಗದವರು ಮನವಿ ಪತ್ರಗಳನ್ನು ತಹಸೀಲ್ದಾರ್‌ ನಿಂಗಪ್ಪ ಬಿರಾದಾರ, ಪಿಎಸ್ಐ ಶಹಜಹಾನ್ ನಾಯಕ ಅವರಿಗೆ ನೀಡಿ ತಮಗಾಗುತ್ತಿರುವ ಮಾನಸಿಕ ಹಿಂಸೆಯ ಬಗ್ಗೆ ವಿವರಿಸಿ ಈ ರೀತಿಯಾಗಿ ವೈಯಕ್ತಿಕ ಆರೋಪ ಮಾಡಬಾರದು ಎಂದು ವಿನಂತಿಸಿದರು. ಇಳಕಲ್ ಹುನಗುಂದ ಅವಳಿ ತಾಲೂಕುಗಳ ಪಂಚಾಯತಿ ಕಾರ್ಯನಿರ್ವಾಹಕ ಮುರಳಿಧರ ದೇಶಪಾಂಡೆ ಸೇರಿದಂತೆ ಎರಡೂ ತಾಲೂಕುಗಳ ಗ್ರಾಮಾಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Next Article