ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನದಿ ಸ್ನಾನದ ವೇಳೆ ೪೩ ಬಲಿ

10:34 PM Sep 26, 2024 IST | Samyukta Karnataka

ಪಟನಾ: ಬಿಹಾರದಲ್ಲಿ ಬುಧವಾರ ಆಚರಿಸಲ್ಪಟ್ಟ ಜೀವಿತ್‌ಪುತ್ರಿಕ ಹಬ್ಬದ ಸಂದರ್ಭದಲ್ಲಿ ವಿವಿಧ ಕಡೆಗಳಲ್ಲಿ ಸಂಭವಿಸಿದ ಘಟನೆಗಳಲ್ಲಿ ೩೭ ಮಕ್ಕಳು ಸೇರಿದಂತೆ ೪೩ ಜನ ಬಲಿಯಾಗಿದ್ದಾರೆ. ಇನ್ನೂ ಮೂವರು ನಾಪತ್ತೆಯಾಗಿದ್ದಾರೆ. ಈ ಹಬ್ಬದ ನಿಮಿತ್ತ ನದಿ ಮತ್ತು ಕೊಳ್ಳಗಳಲ್ಲಿ ಸ್ನಾನಕ್ಕೆ ಇಳಿದಾಗ ಹದಿನೈದು ರಾಜ್ಯಗಳಲ್ಲಿ ಇಂಥ ಘಟನೆಗಳು ಸಂಭವಿಸಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ ಎಂದು ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.
ಮೃತರ ಸಂಬಂಧಿಕರಿಗೆ ೪ ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದ್ದಾರೆ.
ಬಿಹಾರ, ಜಾರ್ಖಂಡ್ ಮತ್ತು ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಭಾದ್ರಪದ ಕೃಷ್ಣ ಅಷ್ಟಮಿ ದಿನ ‘ಜೀವಿಪುತ್ರಿಕಾ’ ವ್ರತ ಆಚರಿಸುತ್ತಾರೆ. ಈ ಸಂದರ್ಭದಲ್ಲಿ ಮಹಿಳೆಯರು ತಮ್ಮ ಮಕ್ಕಳ ಯೋಗ ಕ್ಷೇಮಕ್ಕಾಗಿ, ದೀರ್ಘಾಯುಷ್ಯಕ್ಕಾಗಿ ಉಪವಾಸ ಮಾಡುತ್ತಾರೆ.

Next Article