ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಮ್ಮ ಬದ್ಧತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ

08:41 PM Feb 01, 2024 IST | Samyukta Karnataka

ಬೆಂಗಳೂರು: ಭಾರತದ ಐಕ್ಯತೆ, ಅಖಂಡತೆ ಬಗ್ಗೆ ನಮ್ಮ ಬದ್ಧತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ ಎಂದು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಹೇಳಿದ್ದಾರೆ.
ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂಬ ಸಂಸದ ಡಿ ಕೆ ಸುರೇಶ್‌ ಮಾತಿಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಜನರ ಭಾವನೆ, ಬೇಸರ ಮತ್ತು ಅಭಿಪ್ರಾಯದ ಬಗ್ಗೆ ಸಂಸದ ಡಿ.ಕೆ.ಸುರೇಶ್ ಅವರು ಕನ್ನಡಿ ಹಿಡಿದಿರುವುದನ್ನು ಬಿಜೆಪಿಯವರು ತಿರುಚುತ್ತಿದ್ದಾರೆ. ಭಾರತದ ಐಕ್ಯತೆ, ಅಖಂಡತೆ ಬಗ್ಗೆ ನಮ್ಮ ಬದ್ಧತೆಯನ್ನು ಯಾರೂ ಪ್ರಶ್ನಿಸುವಂತಿಲ್ಲ. ನಾವೆಲ್ಲಾ ಭಾರತ ಮಾತೆಯ ಮಕ್ಕಳು. ಹೀಗಿರುವಾಗ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ ಎಂದಿದ್ದಾರೆ.

Next Article