ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಿಮ್ಮ ಮನಸಿನಲ್ಲಿದ್ದ ವಿರೋಧ ಈಗ ಮತ್ತೆ ಬಹಿರಂಗವಾಗಿದೆ

07:09 PM Jan 10, 2024 IST | Samyukta Karnataka

ಜ.೨೨ರಂದು ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದೇ ಇರಲು ನಿರ್ಧರಿಸುವ ಮೂಲಕ ಕೋಟ್ಯಂತರ ಹಿಂದುಗಳ ಭಾವನೆಗೆ ಕಾಂಗ್ರೆಸ್ ಮತ್ತೆ ಧಕ್ಕೆ ಮಾಡಿದೆ ಎಂದು ಶಾಸಕ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ.ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೀವು ಭಾಗವಹಿಸದಿದ್ದರೆ ಚಿಂತೆ ಇಲ್ಲ. ಈ ಕ್ಷಣದಿಂದ ರಾಮಮಂದಿರ ಹಾಗೂ ಅಯೋಧ್ಯೆ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಎಂದು ಆಗ್ರಹಿಸಿದ್ದಾರೆ.
ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ.ಅಪೂರ್ಣ ಕಟ್ಟಡದ ಉದ್ಘಾಟನೆಗೆ ಬರುವುದಿಲ್ಲ ಎಂಬುದೊಂದು ಪಿಳ್ಳೆ ನೆವ. ನಿಮ್ಮ ಮನಸಿನಲ್ಲಿದ್ದ ರಾಮ ವಿರೋಧ, ಹಿಂದು ವಿರೋಧ ಈಗ ಮತ್ತೆ ಬಹಿರಂಗವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Next Article