ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪ್ರೀತಂ ಗೌಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವೆ

04:57 PM Mar 10, 2024 IST | Samyukta Karnataka

ಹಾಸನ: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಹಾಸನ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡೆಸುತ್ತಿರುವ ಹಾಲಿ ಸಂಸದ ಪ್ರಜ್ವಲ್ ರೇವಣ್ಣ, ಮುಂದಿನ ದಿನಗಳಲ್ಲಿ ಮಾಜಿ ಶಾಸಕ ಪ್ರೀತಂ ಗೌಡರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಟಿಕೆಟ್ ಅನೌನ್ಸ್ ಆದ್ಮೇಲೆ ಎರಡೂ ಪಕ್ಷದವರು ಸೇರಿ ಎಲ್ಲಾ ಭಾಗಗಳಲ್ಲೂ ಸಭೆ ನಡೆಸುತ್ತೇವೆ ಎಂದರು.
ಈಗಾಗಲೇ ಹಾಸನದ ಹಲವು ಭಾಗಗಳಿಗೆ ಭೇಟಿ ನೀಡಿದ್ದೇನೆ. ಬಿಜೆಪಿ-ಜೆಡಿಎಸ್ ಕಾರ್ಯಕರ್ತರಲ್ಲಿ ಮೈತ್ರಿ ಬಗ್ಗೆ ಒಳ್ಳೆಯ ಅಭಿಪ್ರಾಯವಿದೆ. ಈ ಹಿನ್ನೆಲೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ನಮ್ಮ ಮೈತ್ರಿಗೆ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಿಗಲಿದೆ ಎಂದರು.
ಎರಡೂ ಪಕ್ಷದವರು ಸೇರಿ ಮೊದಲು ಸ್ಥಳೀಯ ಮಟ್ಟದಲ್ಲಿ ಸಭೆ ಮಾಡುತ್ತೇವೆ. ಆ ನಂತರ ದೊಡ್ಡ ಮಟ್ಟದಲ್ಲಿ ಸಭೆ ನಡೆಸುತ್ತೇವೆ. ಕ್ಷೇತ್ರಕ್ಕೆ ಬಿ.ಎಸ್​.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹೆಚ್​.ಡಿ.ಕುಮಾರಸ್ವಾಮಿ ಆಗಮಿಸುವ ವೇಳೆ ಎಲ್ಲರೊಂದಿಗೆ ಮಾತನಾಡಿ ಪೂರ್ವಭಾವಿ ಸಭೆ ಮಾಡ್ತೇವೆ. ಈಗಾಗಲೇ ನಮ್ಮ ಪಕ್ಷದ ಪೂರ್ವಭಾವಿ ಸಭೆಗಳು ನಡೆದಿವೆ. ಈಗ ಜಂಟಿ ಪೂರ್ವಭಾವಿ ಸಭೆಗಳು‌ ನಡೆಯಬೇಕು ಎಂದರು.

Next Article