For the best experience, open
https://m.samyuktakarnataka.in
on your mobile browser.

ಬೆಳಗಾವಿಗೆ ಬಿಜೆಪಿಯ ಸತ್ಯಶೋಧನಾ ಸಮಿತಿ

02:00 PM Dec 15, 2023 IST | Samyukta Karnataka
ಬೆಳಗಾವಿಗೆ ಬಿಜೆಪಿಯ ಸತ್ಯಶೋಧನಾ ಸಮಿತಿ

ಬೆಂಗಳೂರು: ಬೆಳಗಾವಿಯಲ್ಲಿ ಮಹಿಳೆಯ ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಕುರಿತು ಸತ್ಯಶೋಧನಾ ತಂಡ ರಚಿಸಿ, ವಸ್ತುಸ್ಥಿತಿ ಅರಿತು ಪ್ರಕರಣದ ಕುರಿತು ವರದಿ ಸಲ್ಲಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆದೇಶಿಸಿದ್ದಾರೆ. ಈ ಕುರಿತು ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ಬೆಳಗಾವಿಯಲ್ಲಿ ಪರಿಶಿಷ್ಟ ಪಂಗಡದ ಮಹಿಳೆಯ ಮೇಲೆ ನಡೆದ ದೌರ್ಜನ್ಯದ ಕುರಿತು ಸತ್ಯಶೋಧನಾ ತಂಡ ರಚಿಸಿ, ವಸ್ತುಸ್ಥಿತಿ ಅರಿತು ಪ್ರಕರಣದ ಕುರಿತು ವರದಿ ಸಲ್ಲಿಸಲು ಆದೇಶಿಸಿದ್ದಾರೆ ಎಂದು ಬರೆದುಕೊಂಡಿದ್ದಾರೆ.