ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

"ಮೌಲ್ಯಮಾಪನ" ಕೆಲಸಗಳಿಂದ ಮಾಡಬೇಕೇ ಹೊರತು ಆತನ ಭಕ್ತಿಯಿಂದಲ್ಲ

12:08 PM Jan 24, 2024 IST | Samyukta Karnataka

ಬೆಂಗಳೂರು: ರಾಜಕಾರಿಣಿಯೊಬ್ಬನ ಮೌಲ್ಯಮಾಪನವನ್ನು ಆತನ ಕೆಲಸಗಳಿಂದ ಮಾಡಬೇಕೇ ಹೊರತು ಆತನ ಭಕ್ತಿಯಿಂದಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಣದಲ್ಲಿ ಸುದೀರ್ಘ ಪೋಸ್ಟ್‌ ಮಾಡಿರುವ ಅವರು ಹೌದು, ನಾನು ಯಾವ ಧೈವ ಭಕ್ತನೂ ಅಲ್ಲ, ನಾನು ಸಂವಿಧಾನದ ಭಕ್ತ, ನಾನು ಬುದ್ಧ, ಬಸವ, ಅಂಬೇಡ್ಕರ್, ನಾರಾಯಣಗುರುಗಳು, ನಿಜಶರಣ ಅಂಬಿಗರ ಚೌಡಯ್ಯ ಪ್ರತಿಪಾದಿಸಿದ ಸಮಾನತೆ, ಸ್ವಾಭಿಮಾನ ತತ್ವಗಳ ಭಕ್ತ. ದಯೆಯೇ ಧರ್ಮ, ಮಾನವತೆಯೇ ಪರಮದೈವ ಎಂದು ನಂಬಿದವನು ನಾನು, ಸಂವಿಧಾನದಲ್ಲಿ ಆಸ್ತಿಕನಿಗೂ ನಾಸ್ತಿಕನಿಗೂ ಸಮಾನ ಅವಕಾಶವಿದೆ, ಸಮಾನ ಹಕ್ಕುಗಳಿವೆ..
ಇದನ್ನು ಬಿಜೆಪಿಯವರು ಅರಿತುಕೊಳ್ಳಬೇಕು. ಬಹುಶಃ ನಾನು ಪರಂಪರೆಯ ದೇವಾಲಯಗಳನ್ನು ಸಂದರ್ಶಿಸಿದಷ್ಟು ಬಿಜೆಪಿಯವರು ಹೋಗಿರಲಿಕ್ಕಿಲ್ಲ! ನಾನು ಕಾಶಿ, ಮಥುರಾ, ಬುದ್ಧಗಯಾ, ಅಜ್ಮಿರ್ ದರ್ಗಾ, ಚರ್ಚ್ ಸೇರಿದಂತೆ ಹಲವು ಧಾರ್ಮಿಕ ಕ್ಷೇತ್ರಗಳನ್ನು ಸಂದರ್ಶಿದ್ದೇನೆ, ಭಕ್ತನಾಗಿ ಅಲ್ಲ, ಅಧ್ಯಯನಕಾರನಾಗಿ. ವಿವಿಧ ಕಲೆ, ಸಂಸ್ಕೃತಿ, ಆಚಾರ, ವಿಚಾರ, ಇತಿಹಾಸಗಳನ್ನು ಅಧ್ಯಯನ ಮಾಡುವುದು ನನ್ನ ಆಸಕ್ತಿ. ಮುಂದೆಯೂ ನನ್ನ ಈ ಅಧ್ಯಯನದ ಪ್ರವಾಸಗಳನ್ನು ಮಾಡುತ್ತಿರುತ್ತೇನೆ.
ಭಕ್ತಿ, ನಂಬಿಕೆಗಳನ್ನು ಬಲವಂತವಾಗಿ ಹೇರುವುದಕ್ಕೂ ಸಾಧ್ಯವಿಲ್ಲ, ಬಲವಂತವಾಗಿ ಕಿತ್ತೂಹಾಕಲೂ ಸಾಧ್ಯವಿಲ್ಲ ಎಂಬ ಸತ್ಯವನ್ನು ಟೀಕಿಸುವವರು ಅರ್ಥ ಮಾಡಿಕೊಂಡರೆ ಒಳಿತು.
ನನ್ನ ಭಕ್ತಿ ಏನಿದ್ದರೂ ಸತ್ಯ, ಸಮಾನತೆಯೆಡೆಗೆ ಮಾತ್ರ, ಯಾರನ್ನೋ ಮೆಚ್ಚಿಸಲು ಡಾಂಬಿಕ ದೈವಭಕ್ತನಂತೆ ತೋರಿಸಿಕೊಳ್ಳುವುದು ನನ್ನ ಜಾಯಮಾನವಲ್ಲ. ಹಾಗೆಯೇ, ರಾಜಕಾರಿಣಿಯೊಬ್ಬನ ಮೌಲ್ಯಮಾಪನವನ್ನು ಆತನ ಕೆಲಸಗಳಿಂದ ಮಾಡಬೇಕೇ ಹೊರತು ಆತನ ಭಕ್ತಿಯಿಂದಲ್ಲ ಎಂಬ ವಾಸ್ತವವನ್ನು ಟೀಕಾಕಾರರು ಅರಿತುಕೊಳ್ಳಬೇಕು.
“ಕಣ್ಣಿನಲ್ಲಿ ಕಾಮ, ಮನದಲ್ಲಿ ಕ್ರೋಧ
ಪ್ರಾಣದಲ್ಲಿ ಲೋಭ, ಬುದ್ಧಿಯಲ್ಲಿ ಮದ
ವಿವೇಕದಲ್ಲಿ ಮತ್ಸರ
ಅರುಹಿನಲ್ಲಿ ಮಾಯವುಳ್ಳನ್ನಕ್ಕರ
ಎಂತು ಭಕ್ತನೆಂಬೆ?”
ಟೀಕಿಸುವವರಿಗೆ ಶರಣರ ಈ ವಚನವನ್ನು ಅರ್ಪಿಸುತ್ತೇನೆ ಎಂದಿದ್ದಾರೆ.

Next Article