ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಅಭಿಮಾನಿಯ ಕಾಲಿನ ಮೇಲೆ ಹರಿದ ಯಶ್ ಬೆಂಗಾವಲು ವಾಹನ

03:31 PM Feb 29, 2024 IST | Samyukta Karnataka

ಬಳ್ಳಾರಿ: ನಟ ಯಶ್ ಅವರ ಬೆಂಗಾವಲು ವಾಹನ ಯಶ್‌ ಅವರ ಅಭಿಮಾನಿ ಕಾಲಿನ ಮೇಲೆ ಹರಿದ ಘಟನೆ ನಡೆದಿದೆ.
ಬಳ್ಳಾರಿ ಹೊರವಲಯದ ಬಾಲಾಜಿ ನಗರದಲ್ಲಿ ನೂತನವಗಿ ನಿರ್ಮಾಣವಾಗಿರುವ ಅಮೃತೇಶ್ವರ ಸ್ಪಟಿಕ ಲಿಂಗ ದೇವಸ್ಥಾನ ಉದ್ಘಾಟನೆಗೆ ನಟ ಯಶ್ ಬಂದಿದ್ದರು. ರಾಕಿಂಗ್ ಸ್ಟಾರ್ ಯಶ್‌ನನ್ನು ನೋಡಿ ಕಣ್ತುಂಬಿಕೊಳ್ಳಲು ಸುತ್ತಮುತ್ತಲಿ ಹಳ್ಳಿಗಳಿಂದ ಬಂದಿದ್ದ ಸಾವಿರಾರು ಅಭಿಮಾನಿಗಳು ಬಂದಿದ್ದು. ಅವರಲ್ಲಿ ಸಿರಗುಪ್ಪದಿಂದ ಬಂದಿದ್ದ ವಸಂತ ಎಂಬ ಯುವಕ. ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ತೆರಳುವ ವೇಳೆ ಯಶ್ ಕಾರನ್ನ ಹಿಂಬಾಲಿಸಿಕೊಂಡು ಓಡಿ ಬಂದಿರುವ ಅಭಿಮಾನಿ. ಈ ವೇಳೆ ಯಶ್ ಬೆಂಗಾವಲು ವಾಹನವೊಂದು ಅಭಿಮಾನಿಯ ಕಾಲಿನ ಮೇಲೆ ಹರಿದಿದೆ. ಕಾರಿನ ಚಕ್ರ ಹರಿದು ಪಾದ ತೀವ್ರವಾಗಿ ಗಾಯಗೊಂಡು ರಕ್ತ ಸುರಿದಿದೆ. ತಕ್ಷಣ ಯುವಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಳೆದ ಜನೆವರಿಯಲ್ಲಿ ಹುಟ್ಟುಹಬ್ಬಕ್ಕೆ ಶುಭಕೋರುವ ಬ್ಯಾನರ್ ಕಟ್ಟುವಾಗ ಗದಗನ ಸೂರಣಗಿ ಅಭಿಮಾನಿಗಳು ವಿದ್ಯುತ್ ಸ್ಪರ್ಶದಿಂದ ಮೂವರು ಮೃತಪಟ್ಟಿದ್ದರು.

Next Article