For the best experience, open
https://m.samyuktakarnataka.in
on your mobile browser.

ನಮ್ಮ ಮೆಟ್ರೋ: ಟ್ರ್ಯಾಕ್​ಗೆ ಹಾರಿ ಯುವಕ ಆತ್ಮಹತ್ಯೆ

06:51 PM Aug 03, 2024 IST | Samyukta Karnataka
ನಮ್ಮ ಮೆಟ್ರೋ  ಟ್ರ್ಯಾಕ್​ಗೆ ಹಾರಿ ಯುವಕ ಆತ್ಮಹತ್ಯೆ

ಬೆಂಗಳೂರು: ನಮ್ಮ ಮೆಟ್ರೋ ಟ್ರ್ಯಾಕ್​ಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ.
ನಗರದ ನಾಗಸಂದ್ರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಘಟನೆ ನಂತರ ಕೆಲಕಾಲ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, 35 ವರ್ಷದ ವ್ಯಕ್ತಿಯೊಬ್ಬರು ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ 17.45 ಗಂಟೆಗೆ ಸಮೀಪಿಸುತ್ತಿರುವ ರೈಲಿನ ಮುಂದೆ ಜಿಗಿದಿದ್ದಾರೆ. ಹಸಿರು ಮಾರ್ಗದಲ್ಲಿ ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ, ಉಳಿದ ಮಾರ್ಗದಲ್ಲಿ ಸೇವೆಗಳು ಲಭ್ಯವಿದೆ ಎಂದು ನಮ್ಮ ಮೆಟ್ರೋ ತಿಳಿಸಿದೆ.

Tags :