For the best experience, open
https://m.samyuktakarnataka.in
on your mobile browser.

ನಾಗಮಂಗಲ: ಶಾಲೆ-ಕಾಲೇಜುಗಳಿಗೆ ರಜೆ

11:10 AM Sep 12, 2024 IST | Samyukta Karnataka
ನಾಗಮಂಗಲ  ಶಾಲೆ ಕಾಲೇಜುಗಳಿಗೆ ರಜೆ

ಮಂಡ್ಯ: ನಾಗಮಂಗಲದಲ್ಲಿ ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್​ ಜಾರಿ ಮಾಡಲಾಗಿದೆ.
ಗಣಪತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪರಿಸ್ಥಿತಿ ಉದ್ವಿಗ್ನಗೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಪಟ್ಟಣದ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಸೆಪ್ಟೆಂಬರ್ 14ರ ಮಧ್ಯರಾತ್ರಿ 12 ಗಂಟೆಯವರೆಗೂ ಸೆಕ್ಷನ್​ 144 ಜಾರಿಗೊಳಿಸಿದ್ದೇವೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇನ್ನು ಘಟನೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಸಂಘಟನೆ ಇಂದು ನಾಗಮಂಗಲ ಬಂದ್‌ಗೆ ಕರೆ ಕೊಟ್ಟಿದೆ.

Tags :