ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಾಡ ದೊರೆಗೆ ಊಟ ಉಣಬಡಿಸಿ ಗುರುಕುಟೀರ ಲೋಕಾರ್ಪಣೆ

09:17 PM Nov 23, 2023 IST | Samyukta Karnataka

ಬಾಗಲಕೋಟೆ: ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನದ ಭೋವಿ ಗುರುಪೀಠದ ಗುರುಕುಟೀರದ ಉದ್ಘಾಟನೆಯನ್ನು ಧಾರ್ಮಿಕ ವಿಧಿ, ವಿಧಾನಗಳ ಬದಲಾಗಿ ವಿಭಿನ್ನವಾಗಿ ನೆರವೇರಿಸಲಾಯಿತು.
ಇಳಕಲ್‌ನ ಗುರುಮಹಾಂತ ಶ್ರೀಗಳ ಪಾದಪೂಜೆ ಹಾಗೂ ನಾಡದೊರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವತಾ ಭೋವಿಪೀಠದ ಶ್ರೀಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಊಟ ಉಣಬಡಿಸುವುದರ ಮೂಲಕ ಲೋಕಾರ್ಪಣೆ ಮಾಡಲಾಯಿತು. ಬೆಳಗ್ಗೆ ಇಳಕಲ್‌ನ ಗುರುಮಹಾಂತ ಶ್ರೀಗಳು ಸೇರಿದಂತೆ ಹಲವು ಮಠಾಧೀಶರು ಆಗಮಿಸಿದ್ದರು. ಮಧ್ಯಾಹ್ನ ಮುಖ್ಯಮಂತ್ರಿಗಳಿಗೆ ಸ್ವತಾ ಶ್ರೀಗಳೇ ಮಠದಲ್ಲಿ ಊಟ ಉಣಬಡಿಸಿದ್ದು ವಿಶೇಷವಾಗಿತ್ತು.

Next Article