ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ

11:30 AM Feb 28, 2024 IST | Samyukta Karnataka

ಮಂಗಳೂರು : ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ದತಾ ಪರೀಕ್ಷೆ ಬರೆದು ಶಾಲೆಯಿಂದ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನಲ್ಲಿ ನಡೆದಿದೆ.
ಸುರತ್ಕಲ್‌ನ ವಿದ್ಯಾದಾಯಿನಿ ಶಾಲೆಯ ವಿದ್ಯಾರ್ಥಿಗಳ ಶವ ಇದೀಗ ಹಳೆಯಂಗಡಿಯ ಬಳಿಯಲ್ಲಿ ಪತ್ತೆಯಾಗಿದೆ.
ಸುರತ್ಕಲ್ ಅಗರಮೇಲ್ ನಿವಾಸಿ ಚಂದ್ರಕಾಂತ ಅವರ ಮಗ ಯಶ್ವಿತ್(೧೫), ಹಳೆಯಂಗಡಿ ತೋಕೂರು ನಿವಾಸಿ ವಸಂತ ಅವರ ಪುತ್ರ ರಾಘವೇಂದ್ರ (೧೫), ಸುರತ್ಕಲ್ ಗೊಡ್ಡೆಕೊಪ್ಲ ನಿವಾಸಿ ವಿಶ್ವನಾಥ ಅವರ ಮಗ ನಿರೂಪ(೧೫), ಚಿತ್ರಾಪುರ ನಿವಾಸಿ ದೇವದಾಸ ಅವರ ಪುತ್ರ ಅನ್ವಿತ್(೧೫) ಎಂಬ ವಿದ್ಯಾರ್ಥಿಗಳೇ ಮೃತಪಟ್ಟವರು ಎಂದು ಗುರುತಿಸಲಾಗಿದೆ. ನಾಲ್ವರು ವಿದ್ಯಾರ್ಥಿಗಳು ಕೂಡ ಸುರತ್ಕಲ್‌ನ ವಿದ್ಯಾದಾಯಿನಿ ಪ್ರೌಢಶಾಲೆಯಲ್ಲಿ 10 ನೇ ತರಗತಿ ವಿದ್ಯಾರ್ಥಿಗಳಾಗಿದ್ದರು. ಪೂರ್ವ ಸಿದ್ದತಾ ಪರೀಕ್ಷೆ ನಡೆದ ನಂತರದಲ್ಲಿ ನಾಲ್ವರು ವಿದ್ಯಾರ್ಥಿಗಳು ನಾಪತ್ತೆಯಾಗಿದ್ದರು.
ನಿನ್ನೆ ಪರೀಕ್ಷೆ ಮುಗಿಸಿ ಶಾಲೆಯಿಂದ ಮನೆಗೆ ತೆರಳದೇ ನಾಪತ್ತೆಯಾಗಿದ್ದ ಮಕ್ಕಳಿಗಾಗಿ ಪೋಷಕರು ಮತ್ತು ಪೊಲೀಸರು ಹುಡುಕಾಟ ನಡೆಸಿದ್ದರು.
ಇಂದು ಹಳೆಯಂಗಡಿ ರೈಲ್ವೇ ಸೇತುವೆ ಕೆಳಭಾಗದಲ್ಲಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್, ಸಮವಸ್ತ್ರ ಪತ್ತೆಯಾಗಿದ್ದು, ನದಿಯಲ್ಲಿ ಹುಡುಕಾಟ ನಡೆಸಿದಾಗ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆಯಾಗಿದೆ.
ಶಾಲೆಯಿಂದ ಹಳೆಯಂಗಡಿ ನದಿಗೆ ಈಜಾಡಲು ಬಂದಿರುವ ಶಂಕೆ ವ್ಯಕ್ತವಾಗಿದ್ದು, ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Next Article