For the best experience, open
https://m.samyuktakarnataka.in
on your mobile browser.

ನಾಮಫಲಕದಲ್ಲಿ ಕನ್ನಡವಿರಲೇಬೇಕು

03:17 PM Dec 28, 2023 IST | Samyukta Karnataka
ನಾಮಫಲಕದಲ್ಲಿ ಕನ್ನಡವಿರಲೇಬೇಕು

ಬೆಂಗಳೂರು: ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಕನ್ನಡ ನಾಮಫಲಕ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು "ಬೆಂಗಳೂರಿನ ವಾಣಿಜ್ಯ ಮಳಿಗೆಗಳು ಕನ್ನಡ ನಾಮಫಲಕ ಹಾಕಬೇಕೆನ್ನುವ ಕನ್ನಡಪರ ಸಂಘಟನೆಗಳ ಬೇಡಿಕೆ ಸರಿಯಿದೆ. ನ್ಯಾಯದ ಪರ ಧ್ವನಿ ಎತ್ತುವ ಯಾವುದೇ ಹೋರಾಟಗಳಿಗೆ ನಮ್ಮ ಸರ್ಕಾರದ ವಿರೋಧವಿಲ್ಲ. ಸಂಘಟನೆಗಳು ಶಾಂತಿಯುತ ಪ್ರತಿಭಟನೆಗಳನ್ನು ಮಾಡಬೇಕು. ಆದರೆ ಕಾನೂನನ್ನು ಉಲ್ಲಂಘಿಸುವ ಕೆಲಸ ನಡೆದರೆ, ಅಂತಹವರ ವಿರುದ್ಧ ಕಾನೂನು ರೀತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಬೇರೆ ಭಾಷೆಯ ಬಗ್ಗೆ ನನಗಾಗಲೀ, ನಮ್ಮ ಸರ್ಕಾರಕ್ಕಾಗಲೀ ವಿರೋಧವಿಲ್ಲ. ಕನ್ನಡ ನಾಡಿನಲ್ಲಿ ನಾಮಫಲಕದಲ್ಲಿ ಕನ್ನಡವಿರಲೇಬೇಕು. ಇದು ನಮ್ಮ ನೆಲದ ನಿಯಮ. ಎಲ್ಲರೂ ಇದನ್ನು ಪಾಲಿಸಬೇಕು." ಎಂದಿದ್ದಾರೆ.