For the best experience, open
https://m.samyuktakarnataka.in
on your mobile browser.

ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ

01:57 PM Dec 05, 2023 IST | Samyukta Karnataka
ನಾಯಿ ಬೊಗಳಿದ್ದಕ್ಕೆ ಮಾಲೀಕನ ಮೇಲೆ ಆಸಿಡ್ ದಾಳಿ

ಚಿಕ್ಕಮಗಳೂರು : ಪಕ್ಕದ ಮನೆ ನಾಯಿ ಬೊಗಳಿದ್ದಕ್ಕೆ ಆಸಿಡ್ ದಾಳಿ ನಡೆಸಿರುವ ಅಮಾನವೀಯ ಘಟನೆ ನರಸಿಂಹರಾಜಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ನಡೆದಿದೆ. ನಾಯಿ ಮಾಲೀಕರ ಮೇಲೆ ಆಸಿಡ್ ದಾಳಿ ಮಾಡಿದ ಪಕ್ಕದ ಮನೆಯವರು ಕ್ರೌರ್ಯ ಮೆರೆದಿದ್ದಾರೆ.
ತನ್ನ ಸಾಕಿದ ನಾಯಿ ಬೊಗಳಿದ್ದಕ್ಕೆ ಅದರ ಯಜಮಾನ ಸುಂದರ ನಾಯಿಗೆ ಬೈಗುಳ ಆರಂಭಿಸಿದ್ದಾನೆ, ಆದರೆ ಆತ ತಮಗೆ ಬೈಯುತ್ತಿದ್ದಾನೆ ಎಂದು ತಿಳಿದು ಪಕ್ಕದ ಮನೆಯವರು ಸುಂದರನ ಮುಖಕ್ಕೆ ಆಸಿಡ್ ಎರಚಿದ್ದಾರೆ. ಎನ್.ಆರ್.ಪುರ ತಾಲೂಕಿನ ಕುರಗುಂದ ಗ್ರಾಮದಲ್ಲಿ ಘಟನೆ ನಡೆದಿದ್ದು ಸುಂದರ್ ರಾಜ್ ಆಸಿಡ್ ದಾಳಿಗೆ ಒಳಗಾಗಿ ಗಂಭೀರ ಪರಿಸ್ಥಿತಿ ತಲುಪಿದ್ದಾನೆ. ಆತನ ಎಡಗಣ್ಣಿಗೆ ಗಂಭೀರ ಗಾಯಗಳಾಗಿದ್ದು, ಕಣ್ಣಿನ ಪದರ ಬದಲಿಸುವಂತೆ ವೈದ್ಯರ ಸೂಚನೆ ನೀಡಿದ್ದಾರಂತೆ , ಇದೀಗ ಗಾಯಾಳು ಸುಂದರ್ ರಾಜ್ ಶಿವಮೊಗ್ಗದ ಮೆಗ್ಹಾನ್ ಆಸ್ಪತ್ರೆಗೆ ದಾಖಲಾಗಿದ್ದು ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಸುಂದರ್ ರಾಜ್ ಮೇಲೆ ಆಸಿಡ್ ದಾಳಿದ ಮಾಡಿದ್ದ ಜೇಮ್ಸ್ ತನಗೆ ಬೈಯುತ್ತಿದ್ದಾನೆಂದು ತಿಳಿದು ಸಿಟ್ಟಿನಿಂದ ಆಸಿಡ್ ನಿಂದ ದಾಳಿ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಇದೀಗ ಜೇಮ್ಸ್ ವಿರುದ್ಧ ಎನ್.ಆರ್. ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಎನ್.ಆರ್.ಪುರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.