For the best experience, open
https://m.samyuktakarnataka.in
on your mobile browser.

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ವೈದ್ಯ ಸಾವು

07:41 PM Jan 10, 2024 IST | Samyukta Karnataka
ನಿಂತಿದ್ದ ಲಾರಿಗೆ ಕಾರು ಡಿಕ್ಕಿ  ವೈದ್ಯ ಸಾವು

ಬೆಳಗಾವಿ: ರಸ್ತೆ ಬಳಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವೈದ್ಯ ಹಾಗೂ ಇಬ್ಬರು ಪದವೀಧರರು ಗಾಯಗೊಂಡ ಘಟನೆ ನಡೆದಿದೆ.
ಬೆಳಗಾವಿ ಯಡಿಯೂರಪ್ಪ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದ್ದು, ಮೃತ ವೈದ್ಯರನ್ನು ಜಮಖಂಡಿಯ ಸೌರಭ ಕಾಂಬಳೆ(೨೫) ಎಂದು ಗುರುತಿಸಲಾಗಿದೆ. ಜಮಖಂಡಿಯ ಗಿರೀಶ ಕರೆಮ್ಮನವರ(೨೫), ಚೇತನ ಧರಿಗೌಡರ (೨೫) ಗಂಭೀರವಾಗಿ ಗಾಯಗೊಂಡಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಂಗಳವಾರ ತಡರಾತ್ರಿ ಪಾರ್ಟಿ ಮುಗಿಸಿಕೊಂಡು ಮೂವರು ಗೆಳೆಯರು ವಾಪಸ್ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.