For the best experience, open
https://m.samyuktakarnataka.in
on your mobile browser.

ನಿಗದಿತ ಸಮಯದೊಳಗೆ ಕಾಮಗಾರಿ ಮುಗಿಸಿ

03:55 PM Sep 12, 2024 IST | Samyukta Karnataka
ನಿಗದಿತ ಸಮಯದೊಳಗೆ ಕಾಮಗಾರಿ ಮುಗಿಸಿ

ಬೆಂಗಳೂರು: ಕಳಪೆ ಕಾಮಗಾರಿ ಸರಿಪಡಿಸಬೇಕು ಹಾಗೂ ಈ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ವರು ಇಂದು ತಮ್ಮ ಬೆಂಗಳೂರು ಸಿಟಿ ರೌಂಡ್ಸ್‌ನ ಭಾಗವಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ಹೆಬ್ಬಾಳದ ಅಂಡರ್ ಪಾಸ್ ಹಾಗೂ ಫ್ಲೈ ಓವರ್ ಕಾಮಗಾರಿಯನ್ನು ವೀಕ್ಷಿಸಿ, ನಿಗದಿತ ಸಮಯದೊಳಗೆ ಕಾಮಗಾರಿಯನ್ನು ಮುಗಿಸಿ, ಸಾರ್ವಜನಿಕರ ಸಂಚಾರಕ್ಕೆ ಮುಕ್ತಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಇದೇ ವೇಳೆ ಕೆಲವೆಡೆ ಕಾಮಗಾರಿಯ ಗುಣಮಟ್ಟ ಕಾಯ್ದುಕೊಳ್ಳದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ, ಈ ಹಿನ್ನೆಲೆಯಲ್ಲಿ ಕಳಪೆ ಕಾಮಗಾರಿ ಸರಿಪಡಿಸಬೇಕು ಹಾಗೂ ಈ ತಪ್ಪು ಮರುಕಳಿಸದಂತೆ ನೋಡಿಕೊಳ್ಳಬೇಕು, ಇಲ್ಲದಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

Tags :