For the best experience, open
https://m.samyuktakarnataka.in
on your mobile browser.

ನಿರ್ಮಲಾ ಸೀತಾರಾಮನ್​ರನ್ನ ಭೇಟಿಯಾದ ವಿಜಯೇಂದ್ರ

11:04 AM Nov 17, 2023 IST | Samyukta Karnataka
ನಿರ್ಮಲಾ ಸೀತಾರಾಮನ್​ರನ್ನ ಭೇಟಿಯಾದ ವಿಜಯೇಂದ್ರ

ಬೆಂಗಳೂರು: ವಿಪಕ್ಷ ನಾಯಕರ ಆಯ್ಕೆಗೆಂದು ಬೆಂಗಳೂರಿಗೆ ಆಗಮಿದ ಬಿಜೆಪಿ ಹೈಕಮಾಂಡ್ ವೀಕ್ಷಕರ ತಂಡ ಆಗಮಿಸಿದ್ದು. ವಿಧಾನಸಭೆ ಮತ್ತು ವಿಧಾನಪರಿಷತ್ ವಿಪಕ್ಷ ನಾಯಕರ ಆಯ್ಕೆ ವಿಚಾರ ಸಂಬಂಧ ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ವೀಕ್ಷಕರು ಬೆಂಗಳೂರಿಗೆ ಆಗಮಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಶ್ಯಂತ್ ಕುಮಾರ್ ಆಗಮಿಸಿದ್ದಾರೆ. ವೀಕ್ಷಕರು ಸಂಜೆ ನಡೆಯುವ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇನ್ನು ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಜಯೇಂದ್ರ ಚಿತ್ರಗಳನ್ನು ಹಾಕಿ ಪೋಸ್ಟ್‌ ಮಾಡಿರುವ ಅವರು ರಾಜ್ಯ ಬಿಜೆಪಿ ಕಚೇರಿಗೆ ಆಗಮಿಸಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ರಾಜ್ಯಾಧ್ಯಕ್ಷ ವಿಜಯೇಂದ್ರ ಸ್ವಾಗತಿಸಿದರು. ಭಾರತದ ಆರ್ಥಿಕ ಸದೃಢತೆಗೆ ಹೊಸ ಮುನ್ನುಡಿ ಬರೆದು ಪ್ರಧಾನಿ ನರೇಂದ್ರ ಮೋದಿ ಜೀ ಅವರ ಸ್ವಾವಲಂಬಿ ಹಾಗೂ ಸಮೃದ್ಧ ಭಾರತ ನಿರ್ಮಾಣದ ಮಹಾ ಸಂಕಲ್ಪಕ್ಕೆ ಹೆಗಲು ಕೊಟ್ಟಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ಮಾರ್ಗದರ್ಶನ ಕೋರಿ ಅವರ ಆಶೀರ್ವಾದ ಪಡೆಯಲಾಯಿತು ಎಂದಿದ್ದಾರೆ.