For the best experience, open
https://m.samyuktakarnataka.in
on your mobile browser.

ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

03:56 PM Apr 08, 2024 IST | Samyukta Karnataka
ನಿವೃತ್ತಿ ಘೋಷಿಸಿದ ಮಾಜಿ ಸಿಎಂ ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ: ಕರ್ನಾಟಕದ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಎಂ. ವೀರಪ್ಪ ಮೊಯ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್​​ ನೀಡಬೇಕೆಂದು ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದರು. ಆದರೆ, ಹೈಕಮಾಂಡ್ ಸ್ಪರ್ಧೆಯಿಂದ ಹಿಂದೆ ಸರಿಯಲು ಮಾನವಿ ಮಾಡಿತ್ತು. ಹೀಗಾಗಿ ಹೈಕಮಾಂಡ್​​ಗೆ ಗೌರವ ಕೊಟ್ಟು ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದರು. ಅಲ್ಲದೇ ರಕ್ಷಾ ರಾಮಯ್ಯಗೆ ಅವರಿಗೆ ಬೆಂಬಲ ನೀಡುತ್ತೇನೆ ಎಂದು ಅವರು ಘೋಷಿಸಿದರು.