ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನೋಟಿಸ್‌ ವಾಪಾಸ್ ಪಡೆಯದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ

07:06 PM Oct 28, 2024 IST | Samyukta Karnataka

ಬೆಂಗಳೂರು: ವಿಜಯಪುರ ಜಿಲ್ಲೆಯ ರೈತರಿಗೆ ವಕ್ಫ್‌ ಬೋರ್ಡ್​ನಿಂದ ನೋಟಿಸ್ ವಿಚಾರವಾಗಿ ನಮ್ಮ ಹೋರಾಟ ಪ್ರಾರಂಭ ಆಗುವ ಮುಂಚೆಯೇ ರಾಜ್ಯ ಸರ್ಕಾರ ಶರಣಾಗಿದೆ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ತಿಳಿಸಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದು ವಕ್ಫ್ ಮಂಡಳಿ ರೈತರಿಗೆ ನೀಡಿರುವ ನೋಟೀಸನ್ನು ವಾಪಾಸ್ ಪಡೆಯುತ್ತೇವೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲರು ಹೇಳಿದ್ದಾರೆ. ಆದರೆ, ನೋಟೀಸನ್ನು ವಾಪಾಸ್ ಪಡೆಯುವುದರೊಂದಿಗೆ, ಪಹಣಿಯಲ್ಲಿ ವಕ್ಫ್ ಬೋರ್ಡ್ ಇಂಡೀಕರಣವನ್ನು ತೆಗೆದು ಹಾಕಬೇಕು. ಇವೆಲ್ಲ ಪ್ರಕ್ರಿಯೆಯನ್ನು ನವಂಬರ್ 3 ರ ಒಳಗೆ ಮುಗಿಸಿದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಆಗುವುದು ನಿಶ್ಚಿತ ಎಂದಿದ್ದಾರೆ.

Tags :
#ಬಸನಗೌಡಪಾಟೀಲಯತ್ನಾಳ#ವಕ್ಫ್‌#ವಿಜಯಪುರ
Next Article