ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ನೋಡುಗರ ಕಣ್ಮನ ಸೆಳೆದ ಸಂವಿಧಾನ ಜಾಗೃತಿ ಸಡಗರ

12:59 PM Mar 11, 2024 IST | Samyukta Karnataka

ವಾಡಿ: ಪಟ್ಟಣದ ಹೊರ ವಲಯದ ಬಳಿರಾಮ ಚೌಕ್ ದಿಂದ ಪ್ರಾರಂಭಗೊಂಡ ಬೃಹತ್ ಸಂವಿಧಾನ ಜಾಗೃತಿ ಜಾಥಾದ ಭವ್ಯ ಮೆರವಣಿಗೆಗೆ ಜಿಲ್ಲಾಧಿಕಾರಿ ಫೌಜೀಯ ತರುನ್ನಮ ಡೊಳ್ಳು ಬಾರಿಸುವ ಮೂಲಕ ಚಾಲನೆ ನೀಡಿದರು.

ಡೊಳ್ಳಿನ ಕುಣಿತ, ವೀರಗಾಸೆ ನೃತ್ಯ ಪ್ರದರ್ಶನ, ಲಂಬಾಣಿಗರ ನೃತ್ಯ, ಸಂವಿಧಾನ ಜಾಗೃತಿ ಜಾಥಾ ಸ್ಥಬ್ಧ ಚಿತ್ರ, ಮಳಖೇಡ ರಾಷ್ಟ್ರಕೂಟರ ಕೊಟೆಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು.

ಬಳಿರಾಮ ಚೌಕ್ ವೃತದಿಂದ ಮೂಲಕ ಪ್ರಾರಂಭವಾದ ಮೆರವಣಿಗೆ ಶ್ರೀಸೇವಾಲಾಲ್ ಮಂದಿರ, ಕುಂದನೂರ ಚೌಕ್ ವೃತ್ತ, ಮೌಲಾನ ಅಬ್ದುಲ್ ಕಲಾಂ ಅಜಾದ್ ವೃತ್ತ, ಡಾ.ಅಂಬೇಡ್ಕರ್ ವೃತ್ತ ಹಾಗೂ ಶ್ರೀಬಸವೇಶ್ವರ ವೃತ್ತದ ಮೂಲಕ ತೆರಳಿ ವೇದಿಕೆ ತಲುಪಿತು. ಸಾವಿರಾರು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮಹಿಳೆಯರು ಬಣ್ಣ ಬಣ್ಣದ ಉಡುಪು ಧರಿಸಿ ನೋಡುಗರ ಗಮನ ಸೆಳೆದರು. ಸೇಡಂ ಸಹಾಯಕ ಆಯುಕ್ತ ಆಶಪ್ಪ ಪೂಜಾರಿ, ಜಿಪಂ ಸಿಇಒ ಭವರಸಿಂಗ್ ಮೀನಾ ಹಾಗೂ ದಲಿತ ಹಿರಿಯ ಮುಖಂಡ ಟೋಪಣ್ಣ ಕೊಮಟೆ ಹಾಗೂ ಕಲಾತಂಡದವರು ಇದ್ದರು.

Next Article