ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪತಿಯ ಹತ್ಯೆಗೆ ಪತ್ನಿಯಿಂದ ೫೦ ಸಾವಿರ ಬಹುಮಾನ

10:54 PM Mar 31, 2024 IST | Samyukta Karnataka

ಆಗ್ರಾ: ಮದುವೆಯಾದ ಐದೇ ತಿಂಗಳಲ್ಲೇ ಪತಿ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ತವರು ಮನೆ ಸೇರಿರುವ ಮಹಿಳೆಯೊಬ್ಬಳು ಪತಿಯ ಹತ್ಯೆಗಾಗಿ ೫೦ ಸಾವಿರ ರೂ ಬಹುಮಾನ ನೀಡುವುದಾಗಿ ತನ್ನ ವಾಟ್ಸಪ್ ಸ್ಟೇಟಸ್‌ನಲ್ಲಿ ಘೋಷಿಸಿಕೊಂಡಿದ್ದಾಳೆ. ಉತ್ತರಪ್ರದೇಶದ ಆಗ್ರಾ ಜಿಲ್ಲೆಯ ಬಹ್ ಎಂಬಲ್ಲಿ ಈ ಘಟನೆ ನಡೆದಿದ್ದು ಮಹಿಳೆ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪತಿಗೆ ನೆರೆಯಮನೆಯವಳ ಜೊತೆ ಅಕ್ರಮ ಸಂಬಂಧವಿದೆ ಎಂಬ ಆರೋಪದಲ್ಲಿ ತವರು ಮನೆ ಸೇರಿರುವ ಮಹಿಳೆ ಈಗ ಜೀವನಾಂಶಕ್ಕಾಗಿ ಭಿಂಡ್‌ನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಇದೇ ವೇಳೆ ಈ ಮಹಿಳೆಯ ಪ್ರಿಯಕರನಿಂದ ದೂರವಾಣಿ ಮೂಲಕ ತನಗೆ ಜೀವಬೆದರಿಕೆ ಬಂದಿದೆ ಎಂದು ಪತಿಯೂ ದೂರಿದ್ದಾನೆ.

Next Article