ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪದ್ಮಣ್ಣವರ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ

07:53 PM Oct 22, 2024 IST | Samyukta Karnataka

ಬೆಳಗಾವಿ: ಬೆಳಗಾವಿಯ ಲೇವಾದೇವಿ ವ್ಯವಹಾರಗಾರ, ಉದ್ಯಮಿ ಸಂತೋಷ ಪದ್ಮಣ್ಣವರ ಕೊಲೆ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ.
ಪದ್ಮಣ್ಣವರ ಪತ್ನಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಉಮಾ ಅವರಿಗೆ ನಿದ್ದೆ ಮಾತ್ರೆಯನ್ನು ತಂದು ಕೊಟ್ಟಿದ್ದ ಕೆಲಸದಾಳು ಮಂಜುನಾಥ ತೇರ್ಕಲ್ ಎಂಬುವನೇ ಬಂಧಿತ ಆರೋಪಿ. ಇದರಿಂದ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದಂತಾಗಿದೆ.
ಪದ್ಮಣ್ಣವರ ಸಾವಿನ ಬಗ್ಗೆ ಮಗಳು ಸಂದೇಹ ವ್ಯಕ್ತಪಡಿಸಿ ಮಾಳಮಾರುತಿ ಠಾಣೆಗೆ ದೂರು ನೀಡಿದ ಬೆನ್ನಲ್ಲೇ ಕೊಲೆ ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಮಂಜುನಾಥ ತಲೆ ಮರೆಸಿಕೊಂಡಿದ್ದ. ನಿನ್ನೆ ರಾತ್ರಿ ಈತನನ್ನು ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ. ಗಮನಿಸಬೇಕಾದ ಮತ್ತೊಂದು ಸಂಗತಿ ಎಂದರೆ, ಸಂತೋಷ ಪದ್ಮಣ್ಣವರ ಹತ್ತಿರ ಬಡ್ಡಿ ಮೇಲೆ ಸಾಲ ಪಡೆದವರ ಪಟ್ಟಿ ಈಗ ಮಾಳಮಾರುತಿ ಪೊಲೀಸರ ಕೈಗೆ ಸಿಕ್ಕಿದೆ, ಹೀಗಾಗಿ ಅವರನ್ನೂ ಕೂಡ ಮುಂದಿನ ದಿನಗಳಲ್ಲಿ ಕರೆದು ವಿಚಾರಣೆ ಮಾಡುವ ಸಾಧ್ಯತೆಗಳಿವೆ. ಈ ಸಾಲ ಪಡೆದವರ ಪಟ್ಟಿಯಲ್ಲಿ ಕೆಲ ಗಣ್ಯರ ಹೆಸರುಗಳಿವೆ ಎಂದು ಗೊತ್ತಾಗಿದೆ.

Tags :
belagavimurderpadmannavarsantosh
Next Article