For the best experience, open
https://m.samyuktakarnataka.in
on your mobile browser.

ಪದ್ಮ ಪ್ರಶಸ್ತಿ ಪುರಸ್ಕೃತ ನೃತ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ನಿಧನ

06:59 PM Aug 03, 2024 IST | Samyukta Karnataka
ಪದ್ಮ ಪ್ರಶಸ್ತಿ ಪುರಸ್ಕೃತ ನೃತ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ನಿಧನ

ನವದೆಹಲಿ: ಪದ್ಮಾ ಪ್ರಶಸ್ತಿ ಪುರಸ್ಕೃತ ನೃತ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ನಿಧನರಾಗಿದ್ದಾರೆ.
ನವದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ದೀರ್ಘಕಾಲದವರೆಗೆ ದೈಹಿಕ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಕೆಲವು ತಿಂಗಳುಗಳಿಂದ ಅವರನ್ನು ಐಸಿಯುನಲ್ಲಿ ಇರಿಸಲಾಗಿತ್ತು. ಅವರಿಗೆ ಚಿಕಿತ್ಸೆ ನೀಡಲು ತಜ್ಞ ವೈದ್ಯರ ತಂಡ ರಚಿಸಲಾಗಿತ್ತು. ಆದರೆ, ಶನಿವಾರ ಮಧ್ಯಾಹ್ನ ಜಾಮಿನಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

Tags :