ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪರೀಕ್ಷೆ: ಈ ಪ್ರಹಸನ ಅತ್ಯಂತ ಕೆಟ್ಟ ನಿರ್ಧಾರ

11:19 AM Mar 20, 2024 IST | Samyukta Karnataka
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಾಕಷ್ಟು ದೂರ ಇರುವ ಜಿಲ್ಲೆಗಳಿಂದ ಬೆಂಗಳೂರಿಗೆ ಬಂದು ಪರೀಕ್ಷೆ ಬರೆಯುವ ಈ ಪ್ರಹಸನ ಅತ್ಯಂತ ಕೆಟ್ಟ ನಿರ್ಧಾರ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಹೇಳಿದ್ದಾರೆ.
ಬೆಂಗಳೂರಿಗೆ ಬಂದು ಪರೀಕ್ಷೆ ಬರೆಯುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು ಉತ್ತರ ಕರ್ನಾಟಕದ ಕಲಬುರಗಿ, ಬೆಳಗಾವಿ, ವಿಜಯಪುರ, ಗದಗ ಸೇರಿದಂತೆ ಬೆಂಗಳೂರಿನಿಂದ ಸಾಕಷ್ಟು ದೂರ ಇರುವ ಜಿಲ್ಲೆಗಳಿಂದ ಬೆಂಗಳೂರಿಗೆ ಬಂದು ಪರೀಕ್ಷೆ ಬರೆಯುವ ಈ ಪ್ರಹಸನ ಅತ್ಯಂತ ಕೆಟ್ಟ ನಿರ್ಧಾರ ಹಾಗೂ ಆಡಳಿತಾತ್ಮಕ ವೈಫಲ್ಯವೇ ಸರಿ. ತಂತ್ರಜ್ಞಾನ ಮುಂದುವರೆದಿರುವ ಈ ಕಾಲದಲ್ಲಿ ವಿದ್ಯಾರ್ಥಿಗಳು ೮-೯ ತಾಸು ಪ್ರಯಾಣಿಸಿ, ಇಲ್ಲಿ ಬಂದು ತಂಗಲು ಹಣ ಕೊಟ್ಟು, ಬಸ್, ಟ್ರೈನಿಗೆ ದುಡ್ಡು ಖರ್ಚು ಮಾಡಿಸುವುದು ತರವಲ್ಲ. ಈ ಕೂಡಲೇ ಈ ಆದೇಶವನ್ನು ಹಿಂಪಡೆದು, ಆಯಾ ಜಿಲ್ಲೆಗಳಲ್ಲೇ ಅಭ್ಯರ್ಥಿಗಳು, ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯುವಂತಾಗಲಿ ಎಂದಿದ್ದಾರೆ.

Next Article