For the best experience, open
https://m.samyuktakarnataka.in
on your mobile browser.

ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಮುಂದೂಡಿಕೆ

08:02 PM Dec 04, 2023 IST | Samyukta Karnataka
ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಮುಂದೂಡಿಕೆ

ಬೆಳಗಾವಿ: ಡಿ. 23ಕ್ಕೆ ನಿಗದಿಯಾಗಿದ್ದ ಪಿಎಸ್ಐ ನೇಮಕಾತಿ ಮರು ಪರೀಕ್ಷೆಯನ್ನು ಒಂದು ತಿಂಗಳ ಕಾಲ ಮುಂದೂಡಲಾಗಿದೆ.
ವಿಧಾನಸಭೆಯಲ್ಲಿಂದು ಬಿಜೆಪಿ ಸದಸ್ಯ ಬಸನಗೌಡ ಪಾಟೀಲ್ ಯತ್ನಾಳ್ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಪಕ್ಷಾತೀತವಾಗಿ ಎಲ್ಲ ಸದಸ್ಯರು ಮಾಡಿದ ಆಗ್ರಹಕ್ಕೆ ಮಣಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಒಂದು ತಿಂಗಳ ಕಾಲ ಮುಂದೂಡಿದರು. ಡಿ. 23ರ ಬದಲು ಮುಂದಿನ ಜನವರಿ 23ಕ್ಕೆ ನಡೆಸುವುದಾಗಿ ಘೋಷಿಸಿದರು.