For the best experience, open
https://m.samyuktakarnataka.in
on your mobile browser.

ಪಿಎಸ್ಐ ಸಾವು ಪ್ರಕರಣ ಆರೋಪಗಳು ಸತ್ಯಕ್ಕೆ ದೂರ: ತುನ್ನೂರು

11:22 PM Aug 05, 2024 IST | Samyukta Karnataka
ಪಿಎಸ್ಐ ಸಾವು ಪ್ರಕರಣ ಆರೋಪಗಳು ಸತ್ಯಕ್ಕೆ ದೂರ  ತುನ್ನೂರು

ಯಾದಗಿರಿ: ಪಿಎಸ್ಐ ಪರಶುರಾಮ್ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾದಗಿರಿ ಶಾಸಕ ಚೆನ್ನಾರಡ್ಡಿ ಪಾಟೀಲ್ ತುನ್ನೂರು ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ಆರೋಪಗಳೆಲ್ಲ ಸತ್ಯಕ್ಕೆ ದೂರವಾದದ್ದು ಎಂದು ಹೇಳಿದ್ದಾರೆ.
ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿ ತನಿಖೆಗೆ ವಹಿಸಿದ್ದು, ವರದಿ ಏನು ಬರುತ್ತದೆ ಅದಕ್ಕೆ ನಾವೆಲ್ಲರೂ ಗೌರವ ಕೊಡಬೇಕು. ಅವರೇನಾದರೂ ವಿಚಾರಣೆಗೆ ಕರೆದರೆ ಹಾಜರಾಗುತ್ತೇನೆ ಎಂದಿದ್ದಾರೆ.