ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪೂಜೆಗೆ ಆಗಮಿಸಿದ ಪ್ರತಾಪ್ ಸಿಂಹಗೆ ಘೇರಾವ್

12:00 PM Jan 22, 2024 IST | Samyukta Karnataka

ಮೈಸೂರು: ಹಾರೋಹಳ್ಳಿ ಮತ್ತು ಗುಜ್ಜೇಗೌಡನಪುರ ಗ್ರಾಮಸ್ಥರು ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಕೆಲ ಸ್ಥಳೀಯರು ಘೇರಾವ್ ಹಾಕಿ ದಲಿತ ವಿರೋಧಿ ಎಂದು ಕರೆದು ಪೂಜೆಗೆ ಅವಕಾಶ ಕಲ್ಪಿಸದೆ ವಾಪಸ್ ಕಳುಹಿಸಿದ ಘಟನೆ ಮೈಸೂರು ತಾಲೂಕು ಹಾರೋಹಳ್ಳಿಯಲ್ಲಿ ನಡೆದಿದೆ. ರಾಮಲಲ್ಲಾ ವಿಗ್ರಹ ಕೆತ್ತನೆಗೆ ಕಲ್ಲು ತೆಗೆದ ಸ್ಥಳದಲ್ಲಿ ಹಾರೋಹಳ್ಳಿ ಮತ್ತು ಗುಜ್ಜೇಗೌಡನಪುರ ಗ್ರಾಮಸ್ಥರು ಆಯೋಜಿಸಿದ್ದ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ವಿರೋಧಿ ಘೋಷಣೆ ಕೂಗಿ ಘೇರಾವ್ ಹಾಕಿದ್ದಾರೆ.

Next Article