ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಪೊಲೀಸ್ ಸಿಬ್ಬಂದಿಯನ್ನೇ ಬಾನೆಟ್ ಮೇಲೆ ಹೊತ್ತೊಯ್ದ ಕಾರು ಚಾಲಕ

11:01 AM Oct 25, 2024 IST | Samyukta Karnataka

ಶಿವಮೊಗ್ಗ: ವಾಹನ ತಪಾಸಣೆ ಮಾಡುತಿದ್ದ ಪೊಲೀಸ್ ಸಿಬ್ಬಂದಿಯನ್ನೇ ಕಾರಿನ ಬಾನೆಟ್ ಮೇಲೆ ಹೊತ್ತೊಯ್ದ ಘಟನೆ ನಡೆದಿದೆ.
ಶಿವಮೊಗ್ಗದ ಪೂರ್ವ ಸಂಚಾರಿ ಪೊಲೀಸರು ಸಹ್ಯಾದ್ರಿ ಕಾಲೇಜು ಮುಂಭಾಗ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ, ಪೂರ್ವ ಸಂಚಾರ ಠಾಣೆಯ ಸಿಬ್ಬಂದಿಯೊಬ್ಬರು ಕಾರು ತಡೆದಿದ್ದಾರೆ. ರಸ್ತೆಯ ಪಕ್ಕಕ್ಕೆ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ ಚಾಲಕ ಕಾರನ್ನು ನಿಲ್ಲಿಸದೆ ಮುಂದೆ ಚಲಾಯಿಸಿದ್ದಾನೆ. ಪೊಲೀಸ್‌ ಸಿಬ್ಬಂದಿ ಕೂಡಲೇ ಕಾರಿನ ಮುಂಭಾಗ ಹಿಡಿದುಕೊಂಡು ಬಾನೆಟ್‌ ಮೇಲೆ ಹತ್ತಿದ್ದಾರೆ. ಬಾನೆಟ್‌ ಮೇಲೆ ಪೊಲೀಸ್‌ ಸಿಬ್ಬಂದಿ ಇದ್ದರೂ ಚಾಲಕ ಕಾರು ನಿಲ್ಲಿಸದೆ, ಸಹ್ಯಾದ್ರಿ ಕಾಲೇಜು ಗೇಟ್‌ನಿಂದ ಮತ್ತೂರು ರಸ್ತೆವರೆಗೂ ಸಾಗಿದ್ದಾನೆ ನಂತರ ನಿಲ್ಲಿಸಿದ್ದಾನೆ. ಕಾರು ಚಾಲಕನ ವಿರುದ್ಧ ಪೂರ್ವ ಸಂಚಾರ ಪೊಲೀಸ್​ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಅದೃಷ್ಟವಶಾತ್‌ ಪೊಲೀಸ್‌ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

Next Article