For the best experience, open
https://m.samyuktakarnataka.in
on your mobile browser.

ಪ್ರೀತಿಸಿ ಕೈಕೊಟ್ಟ ಪ್ರಿಯಕರ-ಯುವತಿಯಿಂದ ದೂರು

07:48 PM Jun 07, 2024 IST | Samyukta Karnataka
ಪ್ರೀತಿಸಿ ಕೈಕೊಟ್ಟ ಪ್ರಿಯಕರ ಯುವತಿಯಿಂದ ದೂರು

ಕಾರಟಗಿ: ಪ್ರೀತಿಸಿ ಕೈಕೊಟ್ಟ ಪ್ರಿಯಕರನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಯುವತಿಯೊಬ್ಬಳು ಠಾಣೆ ಮುಂದೆ ಪಾಲಕರೊಂದಿಗೆ ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ.
ಕಾರಟಗಿ ತಾಲೂಕಿನ ಮರ್ಲಾನಹಳ್ಳಿ ಗ್ರಾಮದ ಈ ಯುವತಿ ಗಂಗಾವತಿ ತಾಲೂಕಿನ ನಾಗೇನಹಳ್ಳಿ ಗ್ರಾಮದ ರವಿರಾಜ ವಿರುದ್ಧ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಿಸಿದ್ದಾಳೆ.
ಕಾಲೇಜು ದಿನಗಳಿಂದಲೇ ಪ್ರೀತಿಸಿ ಮದುವೆಯಾಗುವುದಾಗಿ ಒಪ್ಪಂದ ಮಾಡಿಕೊಂಡ ರವಿರಾಜ್, ಎರಡು ವರ್ಷಗಳಿಂದ ಅತ್ಯಾಚಾರ ಮಾಡಿ ಕೈಕೊಟ್ಟು ಹೋಗಿದ್ದಾನೆ. ಖಾಸಗಿ ವಿಡಿಯೊ ಇಟ್ಟುಕೊಂಡು ನಿರಂತರ ಬ್ಲಾಕ್ ಮೇಲೆ ಮಾಡುತ್ತಿದ್ದಾನೆ. ಎರಡು ಮೂರು ಬಾರಿ ಈತ ತನಗೆ ಗರ್ಭಪಾತ ಮಾಡಿಸಿದ್ದಾನೆ ಎಂದು ಯುವತಿ ದೂರಿನಲ್ಲಿ ನಮೂದಿಸಿದ್ದಾಳೆ.
ರವಿರಾಜ್ ವಿರುದ್ಧ ಕ್ರಮ ಕೈಗೊಂಡು ಆತನ ಜತೆ ತನ್ನ ಮದುವೆ ಮಾಡಿಸಿ ನ್ಯಾಯ ಒದಗಿಸಬೇಕೆಂದು ಯುವತಿ ಪೊಲೀಸರನ್ನು ಒತ್ತಾಯಿಸಿದ್ದಾಳೆ. ಹಿರಿಯ ಪೊಲೀಸ್ ಅಧಿಕಾರಿ ನ್ಯಾಯ ಕೊಡಿಸುವುದಾಗಿ ನೀಡಿದ ಭರವಸೆ ಹಿನ್ನೆಲೆಯಲ್ಲಿ ಯುವತಿ ಧರಣಿ ಕೈಬಿಟ್ಟಿದ್ದಾಳೆ.