ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಫಯಾಜ್ ನಿರ್ದೋಷಿಯಾದರೆ ನಾವೇ ಶಿಕ್ಷಿಸುತ್ತೇವೆ

04:23 PM Apr 23, 2024 IST | Samyukta Karnataka

ಹುಬ್ಬಳ್ಳಿ: ನೇಹಾ ಹತ್ಯೆ ಪ್ರಕರಣದ ಆರೋಪಿ ಫಯಾಜ್ ಸಿಐಡಿ ತನಿಖೆಯಿಂದ ನಿರ್ದೋಷಿ ಎಂದು ಸಾಬೀತಾದರೆ, ಅವನಿಗೆ ನಾವೇ ತಕ್ಕ ಶಿಕ್ಷೆ ವಿಧಿಸುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಹೇಳಿದ್ದಾರೆ.
ನಗರದ ಬಿಡ್ನಾಳದ ನೇಹಾ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ, ತಂದೆ-ತಾಯಿಗೆ ಸಾಂತ್ವನ ಹೇಳಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಕರಣದ ತನಿಖೆ ಸಿಐಡಿಗೆ ಒಪ್ಪಿಸಿರುವುದು ಸ್ವಾಗತಾರ್ಹ. ಆದರೆ, ರಾಜ್ಯ ಸರ್ಕಾರ ಒತ್ತಡ ಹೇರಿ ತನಿಖೆಯ ದಿಕ್ಕು ತಪ್ಪಿಸಿದರೆ ಅದಕ್ಕೆ ತಕ್ಕ ಪಾಠ ಅನುಭವಿಸಬೇಕಾಗುತ್ತದೆ. ನಿರ್ದೋಷಿಯಾಗಿ ಫಯಾಜ್ ಹೊರಗೆ ಬಂದರೆ, ನಾವೇ ಶಿಕ್ಷೆ ವಿಧಿಸಿ ಜೈಲಿಗೆ ಹೋಗಲು ಸಿದ್ಧರಿದ್ದೇವೆ ಎಂದು ಹೇಳಿದರು.

Next Article