For the best experience, open
https://m.samyuktakarnataka.in
on your mobile browser.

ಫಲಿತಾಂಶಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿ ನಿಧನ

12:47 PM Oct 02, 2024 IST | Samyukta Karnataka
ಫಲಿತಾಂಶಕ್ಕೂ ಮುನ್ನ ಬಿಜೆಪಿ ಅಭ್ಯರ್ಥಿ ನಿಧನ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಮುಷ್ತಾಕ್ ಅಹ್ಮದ್ ಶಾ ಬುಖಾರಿ (75) ವಿಧಿವಶರಾಗಿದ್ದಾರೆ.
ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಬುಖಾರಿ ಅವರು ಹೃದಯಾಘಾತದಿಂದ ನಿಧನರಾದರು. ಅವರು ಬುಧವಾರ ಬೆಳಗ್ಗೆ 7 ಗಂಟೆಗೆ ಪೂಂಚ್‌ನಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು. ಬುಖಾರಿ ಅವರ ನಿಧನದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಪಕ್ಷಕ್ಕೆ ಭಾರೀ ನಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ರವೀಂದರ್ ರೈನಾ ಹೇಳಿದ್ದಾರೆ. ಸೆಪ್ಟೆಂಬರ್ 25 ರಂದು ನಡೆದ ಚುನಾವಣೆಯಲ್ಲಿ ಸುರೇನ್‌ಕೋಟ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬುಖಾರಿ ಸ್ಪರ್ಧಿಸಿದ್ದರು, ಬುಖಾರಿ ಅವರು 40 ವರ್ಷಗಳ ಕಾಲ ನ್ಯಾಷನಲ್ ಕಾನ್ಫರೆನ್ಸ್ ಕಾರ್ಯಕರ್ತ ಮತ್ತು ಮಾಜಿ ಸಚಿವರಾಗಿದ್ದರು. ಪೂಂಚ್ ಜಿಲ್ಲೆಯ ಸುರೇನ್ ಕೋಟ್ ಕ್ಷೇತ್ರದಿಂದ ಸ್ಪರ್ಧಿಸಿ ಎರಡು ಬಾರಿ ಶಾಸಕರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪಹಾಡಿ ಸಮುದಾಯವನ್ನು ಪರಿಶಿಷ್ಟ ಜಾತಿಯನ್ನಾಗಿ ಮಾಡುವ ಮೂಲಕ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಂಡ ನಂತರ ಅವರು 2023 ರಲ್ಲಿ ಬಿಜೆಪಿ ಸೇರಿದರು. ಬುಖಾರಿ ಪಹಾಡಿ ಪಂಥಕ್ಕೆ ಸೇರಿದ ರಾಜಕೀಯ ನಾಯಕರಾಗಿದ್ದರು,

Tags :