ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಜೆಟ್‌ನಲ್ಲಿ 9 ಕ್ಷೇತ್ರಗಳಿಗೆ ಆದ್ಯತೆ: 4 ಮುಖ್ಯ ಆಧಾರ ಸ್ತಂಭಗಳು

12:46 PM Jul 23, 2024 IST | Samyukta Karnataka

ನವದೆಹಲಿ: ಬಡವರು, ಮಹಿಳೆಯರು, ಯುವಕರು ಮತ್ತು ರೈತರು ಇವು ಮುಖ್ಯ ಆಧಾರ ಸ್ತಂಭಗಳಾಗಿವೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಸತತ 7ನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ ದಾಖಲೆ ಬರೆದಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3.0 ವಿಕಸಿತ ಭಾರತ ಬಜೆಟ್ 2024-25ರಲ್ಲಿ ಅನ್ನದಾತ, ಬಡವ ಹಾಗೂ ಮಹಿಳೆ ಸೇರಿದಂತೆ ಈ 9 ಕ್ಷೇತ್ರಗಳಿಗೆ ಪ್ರಮುವಾಗಿ ಆದ್ಯತೆ ನೀಡಲಾಗಿದೆ. ಕೌಶಲ್ಯ, ಮಧ್ಯಮವರ್ಗ, ನಿರುದ್ಯೋಗ, ಎಮ್ ಎಸ್ ಎಮ್ ಇ ಕ್ಷೇತ್ರಗಳಿಗೂ ಒತ್ತು ನೀಡಲಾಗಿದೆ. ‘ವೀಕಿಸಿತ್ ಭಾರತ್’ಗಾಗಿ 9 ಆದ್ಯತೆಗಳ ಮೇಲೆ ಸರ್ಕಾರವು ನಿರಂತರ ಪ್ರಯತ್ನಗಳನ್ನು ಮಾಡುತ್ತಿದೆ. ಅವುಗಳನ್ನು ಕೃಷಿ, ಉದ್ಯೋಗ ಮತ್ತು ಕೌಶಲ್ಯ, ಉತ್ಪಾದನೆ ಮತ್ತು ಸೇವೆಗಳಲ್ಲಿ ಉತ್ಪಾದಕತೆ ಮತ್ತು ಸ್ಥಿತಿಸ್ಥಾಪಕತ್ವ ಎಂದು ಪಟ್ಟಿ ಮಾಡಲಾಗಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೃಷಿ, ಉದ್ಯೋಗ ಮತ್ತು ಕೌಶಲ್ಯ, ಸುಧಾರಿತ ಮಾನವ ಸಂಪನ್ಮೂಲಗಳು, ಸಾಮಾಜಿಕ ನ್ಯಾಯ, ಉತ್ಪಾದನೆ ಮತ್ತು ಸೇವೆಗಳು, ನಗರಾಭಿವೃದ್ಧಿ, ಇಂಧನ ಭದ್ರತೆ, ಮೂಲಸೌಕರ್ಯ, ನಾವೀನ್ಯತೆಗಳಲ್ಲಿ ಉತ್ಪಾದಕತೆ ಮತ್ತು ಸ್ಥಿತಿಸ್ಥಾಪಕತ್ವವನ್ನು ಪಟ್ಟಿಮಾಡುವ ‘ವೀಕಿಸಿತ್ ಭಾರತ್’ಗಾಗಿ 9 ಆದ್ಯತೆಗಳ ಮೇಲೆ ಸರ್ಕಾರವು ನಿರಂತರ ಪ್ರಯತ್ನಗಳನ್ನು ಮಾಡುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. "ಜಾಗತಿಕ ಆರ್ಥಿಕ ಹಿಂಜರಿಕೆಯ ನಡುವೆಯೂ, ಭಾರತದ ಆರ್ಥಿಕ ಬೆಳವಣಿಗೆಯು ಉಜ್ವಲವಾಗಿದ್ದು, ಏರುಗತಿಯಲ್ಲಿ ಮುಂದುವರಿಯುತ್ತದೆ ಹಾಗೂ ಮುಂದಿನ ವರ್ಷಗಳಲ್ಲಿಯೂ ಸಹ ಈ ಬೆಳವಣಿಗೆ ದರ ಹೀಗೆಯೇ ಮುಂದುವರೆಯಲಿದೆ ಎಂದಿದ್ದಾರೆ.

Next Article