ಸುದ್ದಿಗಳು | ದೇಶರಾಜ್ಯವಿದೇಶ
ನಮ್ಮ ಜಿಲ್ಲೆ | ಚಿಕ್ಕಬಳ್ಳಾಪುರಚಾಮರಾಜನಗರಗದಗಕೋಲಾರಕೊಪ್ಪಳಕೊಡಗುಕಲಬುರಗಿಉತ್ತರ ಕನ್ನಡಉಡುಪಿಚಿಕ್ಕಮಗಳೂರುತುಮಕೂರುಚಿತ್ರದುರ್ಗಶಿವಮೊಗ್ಗಹಾಸನಹಾವೇರಿದಕ್ಷಿಣ ಕನ್ನಡಬೆಂಗಳೂರು ಗ್ರಾಮಾಂತರಬೆಂಗಳೂರುಬೀದರ್ಬಾಗಲಕೋಟೆಬಳ್ಳಾರಿಧಾರವಾಡಬೆಳಗಾವಿವಿಜಯಪುರವಿಜಯನಗರರಾಯಚೂರುರಾಮನಗರಯಾದಗಿರಿಮೈಸೂರುಮಂಡ್ಯ
ವೈವಿಧ್ಯ ಸಂಪದ | ಪದಬಂಧ
ತಾಜಾ ಸುದ್ದಿವಿಶೇಷ ಸುದ್ದಿಅಪರಾಧಸಿನಿ ಮಿಲ್ಸ್ಕೃಷಿ/ವಾಣಿಜ್ಯಕ್ರೀಡೆ

ಬಡ್ಡಿ ಕಿರುಕುಳ: ೨೩ ಬಡ್ಡಿ ಕುಳಗಳ ಬಂಧನ

11:30 AM Sep 01, 2024 IST | Samyukta Karnataka

ಹುಬ್ಬಳ್ಳಿ: ಬಡ್ಡಿ ಕಿರುಕುಳ ನೀಡಿದ ಆರೋಪದ ಮೇಲೆ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ೧೬ ಪ್ರಕರಣ ದಾಖಲಿಸಿ, ೨೩ ಜನ ಆರೋಪಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ ತಿಳಿಸಿದರು.
ಇಲ್ಲಿನ ಉಪನಗರ ಪೊಲೀಸ್ ಠಾಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಲಾಯ ವ್ಯಾಪ್ತಿಯ ೧೩ ಠಾಣೆಗಳಲ್ಲಿ ೧೬ ಪ್ರಕರಣ ದಾಖಲಿಸಿಕೊಂಡಿದ್ದು, ೨೩ ಜನ ಬಡ್ಡಿ ದಂಧೆಕೋರರನ್ನು ಬಂಧಿಸಲಾಗಿದ್ದು, ಅಂದಾಜು ನಾಲ್ಕು ಲಕ್ಷ ಮೌಲ್ಯದ ಕಾರು, ಬೈಕ್, ಮೊಬೈಲ್ ಮತ್ತು ದಾಖಲಾತಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಈ ಹಿಂದೆ ಬಡ್ಡಿ ಕಿರುಕುಳ ಆರೋಪದಲ್ಲಿ ಏಳು ಪ್ರಕರಣದಲ್ಲಿ ೨೫ ಜನರನ್ನು ಬಂಧಿಸಲಾಗಿತ್ತು. ಮುಂದುವರೆದು ೨೩ ಜನರನ್ನು ಬಂಧಿಸಲಾಗಿದೆ. ಸಾರ್ವಜನಿಕರಿಗೆ ಬಡ್ಡಿ ಕಿರುಕುಳ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ‌ ಕಾರ್ಯಾಚರಣೆ ಮುಂದುವರೆಸಲಾಗುತ್ತಿದ್ದು, ಬಡ್ಡಿ ಕುಳಗಳ ಮೇಲೆ ನೊಂದವರು ದೂರು ನೀಡಿದರೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ಸಂದರ್ಭದಲ್ಲಿ ಡಿಸಿಪಿಗಳಾದ ಮಹಾನಿಂಗ ನಂದಗಾವಿ, ರವೀಶ್ ಸಿ.ಆರ್., ಎಸಿಪಿಗಳಾದ ಶಿವಪ್ರಕಾಶ ನಾಯಕ್, ಉಮೇಶ ಚಿಕ್ಕಮಠ ಸೇರಿದಂತೆ ವಿವಿಧ ಠಾಣೆಗಳ ಸಿಪಿಐಗಳು ಇದ್ದರು.

Tags :
#hubli#Hubļi #Dharwad#ಅಪರಾಧ#ಹುಬ್ಬಳ್ಳಿ
Next Article